ಆಪರೇಷನ್ ಸಿಂದೂರ: ಮಹಾತ್ಮ ಗಾಂಧಿ ಕೋಟ್ ಕರ್ನಾಟಕ ಕಾಂಗ್ರೆಸ್ ಟ್ವೀಟ್‌, ಪೇಚಿಗೆ ಸಿಲುಕಿದ ಬಳಿಕ ಡಿಲೀಟ್‌- ಚಿತ್ರನೋಟ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಆಪರೇಷನ್ ಸಿಂದೂರ: ಮಹಾತ್ಮ ಗಾಂಧಿ ಕೋಟ್ ಕರ್ನಾಟಕ ಕಾಂಗ್ರೆಸ್ ಟ್ವೀಟ್‌, ಪೇಚಿಗೆ ಸಿಲುಕಿದ ಬಳಿಕ ಡಿಲೀಟ್‌- ಚಿತ್ರನೋಟ

ಆಪರೇಷನ್ ಸಿಂದೂರ: ಮಹಾತ್ಮ ಗಾಂಧಿ ಕೋಟ್ ಕರ್ನಾಟಕ ಕಾಂಗ್ರೆಸ್ ಟ್ವೀಟ್‌, ಪೇಚಿಗೆ ಸಿಲುಕಿದ ಬಳಿಕ ಡಿಲೀಟ್‌- ಚಿತ್ರನೋಟ

ಆಪರೇಷನ್ ಸಿಂದೂರ್ :ಜಮ್ಮು-ಕಾಶ್ಮೀರದ ಪಹಲ್ಗಾಮ್‌ ದಾಳಿಗೆ ಪ್ರತಿಯಾಗಿ ಭಾರತ ಇಂದು (ಮೇ 7) ನಸುಕಿನ ವೇಳೆ ಉಗ್ರ ನಿಗ್ರಹದ ಆಪರೇಷನ್ ಸಿಂದೂರ ಕಾರ್ಯಾಚರಣೆ ನಡೆಸಿತು. ಸೋಷಿಯಲ್ ಮೀಡಿಯಾಗಳಲ್ಲಿ ಇದಕ್ಕೆ ಸಂಬಂಧಿಸಿದ ಪೋಸ್ಟ್‌ಗಳೆ ತುಂಬಿ ತುಳುಕುತ್ತಿರುವಾಗ ಮಹಾತ್ಮ ಗಾಂಧಿ ಕೋಟ್ ಟ್ವೀಟ್ ಮಾಡಿ ಕರ್ನಾಟಕ ಕಾಂಗ್ರೆಸ್‌ ಪೇಚಿಗೆ ಸಿಲುಕಿತು. ಈ ವೈರಲ್ ವಿದ್ಯಮಾನದ ಚಿತ್ರನೋಟ.

ಪಹಲ್ಗಾಮ್‌ ದಾಳಿಗೆ ಪ್ರತೀಕಾರವಾಗಿ ಭಾರತ ಇಂದು (ಮೇ 7) ನಸುಕಿನ ವೇಳೆ ಉಗ್ರ ನಿಗ್ರಹದ ಆಪರೇಷನ್ ಸಿಂದೂರ ಕಾರ್ಯಾಚರಣೆ ನಡೆಸಿತು. ಪಾಕಿಸ್ತಾನಕ್ಕೆ ಹಾಗೂ ಪಾಕ್ ಆಕ್ರಮಿತ ಜಮ್ಮು ಕಾಶ್ಮಿರಕ್ಕೆ ನುಗ್ಗಿ 9 ಉಗ್ರ ನೆಲೆಗಳನ್ನು ನಾಶ ಮಾಡಿತು. ಇದರ ಬೆನ್ನಿಗೆ ಕರ್ನಾಟಕ ಕಾಂಗ್ರೆಸ್ “ಮನುಕುಲದ ಅತ್ಯಂತ ಶಕ್ತಿಯುತ ಶಸ್ತ್ರ ಎಂದರೆ ಶಾಂತಿ- ಮಹಾತ್ಮ ಗಾಂಧಿ” ಎಂಬ ಕೋಟ್ ಅನ್ನು ಟ್ವೀಟ್ ಮಾಡಿ ಪೇಚಿಗೆ ಸಿಲುಕಿತು. ಕರ್ನಾಟಕ ವಿಧಾನ ಸಭೆಯ ಪ್ರತಿ ಪಕ್ಷ ನಾಯಕ ಆರ್ ಅಶೋಕ್ ಅವರು, ಪಾಕಿಸ್ತಾನದಲ್ಲಿ ಮಿಸೈಲ್ ಬಿದ್ದರೆ, ಕರ್ನಾಟದಲ್ಲಿ ಕಾಂಗ್ರೆಸ್ ಪಕ್ಷ ಯಾಕೆ ಮರಗುತ್ತಿದೆ? ಆಪರೇಷನ್ ಸಿಂದೂರ ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ಉಂಟು ಮಾಡಿದಂತಿದೆ" ಎಂದು ಟ್ವೀಟ್ ಮಾಡಿದರು.
icon

(1 / 8)

ಪಹಲ್ಗಾಮ್‌ ದಾಳಿಗೆ ಪ್ರತೀಕಾರವಾಗಿ ಭಾರತ ಇಂದು (ಮೇ 7) ನಸುಕಿನ ವೇಳೆ ಉಗ್ರ ನಿಗ್ರಹದ ಆಪರೇಷನ್ ಸಿಂದೂರ ಕಾರ್ಯಾಚರಣೆ ನಡೆಸಿತು. ಪಾಕಿಸ್ತಾನಕ್ಕೆ ಹಾಗೂ ಪಾಕ್ ಆಕ್ರಮಿತ ಜಮ್ಮು ಕಾಶ್ಮಿರಕ್ಕೆ ನುಗ್ಗಿ 9 ಉಗ್ರ ನೆಲೆಗಳನ್ನು ನಾಶ ಮಾಡಿತು. ಇದರ ಬೆನ್ನಿಗೆ ಕರ್ನಾಟಕ ಕಾಂಗ್ರೆಸ್ “ಮನುಕುಲದ ಅತ್ಯಂತ ಶಕ್ತಿಯುತ ಶಸ್ತ್ರ ಎಂದರೆ ಶಾಂತಿ- ಮಹಾತ್ಮ ಗಾಂಧಿ” ಎಂಬ ಕೋಟ್ ಅನ್ನು ಟ್ವೀಟ್ ಮಾಡಿ ಪೇಚಿಗೆ ಸಿಲುಕಿತು. ಕರ್ನಾಟಕ ವಿಧಾನ ಸಭೆಯ ಪ್ರತಿ ಪಕ್ಷ ನಾಯಕ ಆರ್ ಅಶೋಕ್ ಅವರು, ಪಾಕಿಸ್ತಾನದಲ್ಲಿ ಮಿಸೈಲ್ ಬಿದ್ದರೆ, ಕರ್ನಾಟದಲ್ಲಿ ಕಾಂಗ್ರೆಸ್ ಪಕ್ಷ ಯಾಕೆ ಮರಗುತ್ತಿದೆ? ಆಪರೇಷನ್ ಸಿಂದೂರ ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ಉಂಟು ಮಾಡಿದಂತಿದೆ" ಎಂದು ಟ್ವೀಟ್ ಮಾಡಿದರು.

ಪಹಲ್ಗಾಮ್ ಉಗ್ರ ದಾಳಿಗೆ ದೇಶ ಪ್ರತೀಕಾರ ತೆಗೆದುಕೊಳ್ಳಬೇಕೆಂದು ಹವಣಿಸುತ್ತಿರುವಾಗ 'ಶತ್ರುಗಳ ಶುಭಚಿಂತಕರಂತೆ', ಟ್ವೀಟ್ ಮಾಡಿರುವ ಕಾಂಗ್ರೆಸ್ ಪಕ್ಷ ಪಾಕಿಸ್ತಾನದೊಂದಿಗಿರುವ 'ನೆಂಟಸ್ಥನ" 'ಅವಿನಾಭಾವ' ಸಂಬಂಧವನ್ನು ಜಗಜ್ಜಾಹೀರು ಮಾಡಿದೆ. ಈ ರೀತಿಯಾದ ಅಲ್ಪತನ ಪ್ರದರ್ಶನ ಮಾಡುವುದು ಬೇಕಾಗಿರಲಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟ್ವೀಟ್ ಮಾಡಿದರು, ಸಂಸದ ಕೆ ಸುಧಾಕರ್, ಕರ್ನಾಟಕ ಕಾಂಗ್ರೆಸ್ ಪಕ್ಷದ ಎಕ್ಸ್‌ ಖಾತೆಯನ್ನ ಪಾಕಿಸ್ತಾನಿಗಳು ಹ್ಯಾಕ್ ಮಾಡಿದ್ದಾರಾ? ಅಥವಾ ಈ ಖಾತೆ ನಡೆಸುತ್ತಿರುವುದೇ ಸ್ಲೀಪರ್ ಸೆಲ್ ಗಳಾ? ಎಂದು ಪ್ರಶ್ನಿಸಿದ್ದಾರೆ.
icon

(2 / 8)

ಪಹಲ್ಗಾಮ್ ಉಗ್ರ ದಾಳಿಗೆ ದೇಶ ಪ್ರತೀಕಾರ ತೆಗೆದುಕೊಳ್ಳಬೇಕೆಂದು ಹವಣಿಸುತ್ತಿರುವಾಗ 'ಶತ್ರುಗಳ ಶುಭಚಿಂತಕರಂತೆ', ಟ್ವೀಟ್ ಮಾಡಿರುವ ಕಾಂಗ್ರೆಸ್ ಪಕ್ಷ ಪಾಕಿಸ್ತಾನದೊಂದಿಗಿರುವ 'ನೆಂಟಸ್ಥನ" 'ಅವಿನಾಭಾವ' ಸಂಬಂಧವನ್ನು ಜಗಜ್ಜಾಹೀರು ಮಾಡಿದೆ. ಈ ರೀತಿಯಾದ ಅಲ್ಪತನ ಪ್ರದರ್ಶನ ಮಾಡುವುದು ಬೇಕಾಗಿರಲಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟ್ವೀಟ್ ಮಾಡಿದರು, ಸಂಸದ ಕೆ ಸುಧಾಕರ್, ಕರ್ನಾಟಕ ಕಾಂಗ್ರೆಸ್ ಪಕ್ಷದ ಎಕ್ಸ್‌ ಖಾತೆಯನ್ನ ಪಾಕಿಸ್ತಾನಿಗಳು ಹ್ಯಾಕ್ ಮಾಡಿದ್ದಾರಾ? ಅಥವಾ ಈ ಖಾತೆ ನಡೆಸುತ್ತಿರುವುದೇ ಸ್ಲೀಪರ್ ಸೆಲ್ ಗಳಾ? ಎಂದು ಪ್ರಶ್ನಿಸಿದ್ದಾರೆ.

ನಮ್ಮ ಸಶಸ್ತ್ರ ಪಡೆಗಳು ಪಾಕಿಸ್ತಾನದೊಳಕ್ಕೆ ಹೋಗಿ ಉಗ್ರ ನೆಲೆಗಳನ್ನು ನಾಶ ಮಾಡಿ ಬಂದ ಸಂದರ್ಭದಲ್ಲಿ ಕರ್ನಾಟಕ ಕಾಂಗ್ರೆಸ್ ಶಾಂತಿ ಮಂತ್ರ ಪಠಿಸುತ್ತಿದೆ. ಭಯೋತ್ಪಾದನೆ ನಿಗ್ರಹಕ್ಕೆ ಸಂಬಂಧಿಸಿದ ಕಾರ್ಯಾಚರಣೆ ವೇಳೆ ದೇಶಹಿತ, ದೇಶಭಕ್ತಿ ಪ್ರದರ್ಶಿಸಬೇಕೇ ಹೊರತು, ತುಷ್ಟೀಕರಣವಲ್ಲ. ಕರ್ನಾಟಕ ಕಾಂಗ್ರೆಸ್‌ ನಾಚಿಕೆಗೇಡಿನ ವಿಚಾರ ಎಂದು ಸಚಿವೆ ಶೋಭಾ ಕರಂದ್ಲಾಜೆ ಟ್ವೀಟ್ ಮಾಡಿದ್ದಾರೆ.
icon

(3 / 8)

ನಮ್ಮ ಸಶಸ್ತ್ರ ಪಡೆಗಳು ಪಾಕಿಸ್ತಾನದೊಳಕ್ಕೆ ಹೋಗಿ ಉಗ್ರ ನೆಲೆಗಳನ್ನು ನಾಶ ಮಾಡಿ ಬಂದ ಸಂದರ್ಭದಲ್ಲಿ ಕರ್ನಾಟಕ ಕಾಂಗ್ರೆಸ್ ಶಾಂತಿ ಮಂತ್ರ ಪಠಿಸುತ್ತಿದೆ. ಭಯೋತ್ಪಾದನೆ ನಿಗ್ರಹಕ್ಕೆ ಸಂಬಂಧಿಸಿದ ಕಾರ್ಯಾಚರಣೆ ವೇಳೆ ದೇಶಹಿತ, ದೇಶಭಕ್ತಿ ಪ್ರದರ್ಶಿಸಬೇಕೇ ಹೊರತು, ತುಷ್ಟೀಕರಣವಲ್ಲ. ಕರ್ನಾಟಕ ಕಾಂಗ್ರೆಸ್‌ ನಾಚಿಕೆಗೇಡಿನ ವಿಚಾರ ಎಂದು ಸಚಿವೆ ಶೋಭಾ ಕರಂದ್ಲಾಜೆ ಟ್ವೀಟ್ ಮಾಡಿದ್ದಾರೆ.

ಉಗ್ರರ ಸಾವಿಗೆ ವಿಲವಿಲ ಒದ್ದಾಡುತ್ತಿರುವ ಕಾಂಗ್ರೆಸ್, ರಾಷ್ಟ್ರೀಯತೆ ಮರೆತ ಕಾಂಗ್ರೆಸ್ ಪಕ್ಷ ಎಂದು ಬಿಜೆಪಿ ಎಂಎಲ್‌ಸಿ ಸಿಟಿ ರವಿ ಟೀಕಿಸಿದ್ದಾರೆ. ಇನ್ನೊಂದೆಡೆ ಸಾರ್ವಜನಿಕರಿಂದಲೂ ಆಕ್ರೋಶ ವ್ಯಕ್ತವಾಗಿದ್ದು, ನೂರಾರು ಜನ ಕಾಂಗ್ರೆಸ್ ನಡೆಯನ್ನು ಪ್ರಶ್ನಿಸಿದ್ದಾರೆ.
icon

(4 / 8)

ಉಗ್ರರ ಸಾವಿಗೆ ವಿಲವಿಲ ಒದ್ದಾಡುತ್ತಿರುವ ಕಾಂಗ್ರೆಸ್, ರಾಷ್ಟ್ರೀಯತೆ ಮರೆತ ಕಾಂಗ್ರೆಸ್ ಪಕ್ಷ ಎಂದು ಬಿಜೆಪಿ ಎಂಎಲ್‌ಸಿ ಸಿಟಿ ರವಿ ಟೀಕಿಸಿದ್ದಾರೆ. ಇನ್ನೊಂದೆಡೆ ಸಾರ್ವಜನಿಕರಿಂದಲೂ ಆಕ್ರೋಶ ವ್ಯಕ್ತವಾಗಿದ್ದು, ನೂರಾರು ಜನ ಕಾಂಗ್ರೆಸ್ ನಡೆಯನ್ನು ಪ್ರಶ್ನಿಸಿದ್ದಾರೆ.

ಪರಿಸ್ಥಿತಿಗೆ ವಿರುದ್ಧವಾದ ಸನ್ನಿವೇಶದಲ್ಲಿ ತನ್ನ ನಡೆಯನ್ನು ಸಮರ್ಥಿಸಿಕೊಳ್ಳುವುದಕ್ಕಾಗದೇ ಕರ್ನಾಟಕ ಕಾಂಗ್ರೆಸ್ ಮಹಾತ್ಮ ಗಾಂಧಿ ಟ್ವೀಟ್ ಅನ್ನು ಡಿಲೀಟ್ ಮಾಡಿದಂತೆ ಇದೆ. ಟ್ವೀಟ್ ಹುಡುಕಾಡಿದರೆ, ಈ ಪುಟ ಅಸ್ತಿತ್ವದಲ್ಲಿ ಇಲ್ಲ ಎಂಬ ಸಂದೇಶ ಕಾಣಿಸುತ್ತಿದೆ.
icon

(5 / 8)

ಪರಿಸ್ಥಿತಿಗೆ ವಿರುದ್ಧವಾದ ಸನ್ನಿವೇಶದಲ್ಲಿ ತನ್ನ ನಡೆಯನ್ನು ಸಮರ್ಥಿಸಿಕೊಳ್ಳುವುದಕ್ಕಾಗದೇ ಕರ್ನಾಟಕ ಕಾಂಗ್ರೆಸ್ ಮಹಾತ್ಮ ಗಾಂಧಿ ಟ್ವೀಟ್ ಅನ್ನು ಡಿಲೀಟ್ ಮಾಡಿದಂತೆ ಇದೆ. ಟ್ವೀಟ್ ಹುಡುಕಾಡಿದರೆ, ಈ ಪುಟ ಅಸ್ತಿತ್ವದಲ್ಲಿ ಇಲ್ಲ ಎಂಬ ಸಂದೇಶ ಕಾಣಿಸುತ್ತಿದೆ.

ಈ ಬೆಳವಣಿಗೆಯ ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಫೋಟೋ ಹಾಕಿಕೊಂಡು ಪ್ರೌಡ್ ಆಫ್ ಅವರ್ ಆರ್ಮ್ಡ್ ಫೋರ್ಸಸ್ (ನಮ್ಮ ಸಶಸ್ತ್ರ ಪಡೆಗಳ ಬಗ್ಗೆ ಹೆಮ್ಮೆ ಇದೆ). ಜೈ ಹಿಂದ್ ಎಂಬ ಇಮೇಜ್ ಅನ್ನು ಟ್ವೀಟ್ ಮಾಡಿದೆ.
icon

(6 / 8)

ಈ ಬೆಳವಣಿಗೆಯ ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಫೋಟೋ ಹಾಕಿಕೊಂಡು ಪ್ರೌಡ್ ಆಫ್ ಅವರ್ ಆರ್ಮ್ಡ್ ಫೋರ್ಸಸ್ (ನಮ್ಮ ಸಶಸ್ತ್ರ ಪಡೆಗಳ ಬಗ್ಗೆ ಹೆಮ್ಮೆ ಇದೆ). ಜೈ ಹಿಂದ್ ಎಂಬ ಇಮೇಜ್ ಅನ್ನು ಟ್ವೀಟ್ ಮಾಡಿದೆ.

ತೀವ್ರ ಟೀಕೆ ಎದುರಿಸಿ ಪೇಚಿಗೆ ಸಿಲುಕಿದ ಬಳಿಕ ಕರ್ನಾಟಕ ಕಾಂಗ್ರೆಸ್‌, “ಭಯೋತ್ಪಾದಕರು ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಎಸಗಿದ ಹೇಡಿತನದ ಪೈಶಾಚಿಕ ಕೃತ್ಯಕ್ಕೆ ನಮ್ಮ ಹೆಮ್ಮೆಯ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ. ಭಯೋತ್ಪಾದನೆಯ ಮೂಲೋತ್ಪಾಟನೆಗೆ ಈ ದಿಟ್ಟ ಕ್ರಮ ಮುನ್ನುಡಿಯಾಗಲಿ. ಭಾರತೀಯ ಸೇನೆಯ ಪರಾಕ್ರಮ, ಶೌರ್ಯ, ನಿಖರತೆ ಶ್ಲಾಘನೀಯ. ಭಯೋತ್ಪಾದನೆಯ ವಿರುದ್ಧ, ದೇಶದ ಐಕ್ಯತೆ, ಸಮಗ್ರತೆ, ಸುರಕ್ಷತೆಗೆ ಸಂಬಂಧಿಸಿದಂತೆ ಭಾರತೀಯ ಸೇನೆ ಹಾಗೂ ಕೇಂದ್ರ ಸರ್ಕಾರದ ಎಲ್ಲ ಕ್ರಮಗಳನ್ನೂ ನಾವು ಬೆಂಬಲಿಸುತ್ತೇವೆ. ಜೈ ಹಿಂದ್” ಎಂಬ ಸಂದೇಶವನ್ನು ಆಪರೇಷನ್ ಸಿಂಧೂರ್ ಇಮೇಜ್ ಅನ್ನೂ ಟ್ವೀಟ್ ಮಾಡಿದೆ.
icon

(7 / 8)

ತೀವ್ರ ಟೀಕೆ ಎದುರಿಸಿ ಪೇಚಿಗೆ ಸಿಲುಕಿದ ಬಳಿಕ ಕರ್ನಾಟಕ ಕಾಂಗ್ರೆಸ್‌, “ಭಯೋತ್ಪಾದಕರು ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಎಸಗಿದ ಹೇಡಿತನದ ಪೈಶಾಚಿಕ ಕೃತ್ಯಕ್ಕೆ ನಮ್ಮ ಹೆಮ್ಮೆಯ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ. ಭಯೋತ್ಪಾದನೆಯ ಮೂಲೋತ್ಪಾಟನೆಗೆ ಈ ದಿಟ್ಟ ಕ್ರಮ ಮುನ್ನುಡಿಯಾಗಲಿ. ಭಾರತೀಯ ಸೇನೆಯ ಪರಾಕ್ರಮ, ಶೌರ್ಯ, ನಿಖರತೆ ಶ್ಲಾಘನೀಯ. ಭಯೋತ್ಪಾದನೆಯ ವಿರುದ್ಧ, ದೇಶದ ಐಕ್ಯತೆ, ಸಮಗ್ರತೆ, ಸುರಕ್ಷತೆಗೆ ಸಂಬಂಧಿಸಿದಂತೆ ಭಾರತೀಯ ಸೇನೆ ಹಾಗೂ ಕೇಂದ್ರ ಸರ್ಕಾರದ ಎಲ್ಲ ಕ್ರಮಗಳನ್ನೂ ನಾವು ಬೆಂಬಲಿಸುತ್ತೇವೆ. ಜೈ ಹಿಂದ್” ಎಂಬ ಸಂದೇಶವನ್ನು ಆಪರೇಷನ್ ಸಿಂಧೂರ್ ಇಮೇಜ್ ಅನ್ನೂ ಟ್ವೀಟ್ ಮಾಡಿದೆ.

ಕರ್ನಾಟಕ ಕಾಂಗ್ರೆಸ್ ಈಗಾಗಲೇ ಮಾಡಿದ ಎಡವಟ್ಟಿನ ಬಳಿಕ ಹಾಕಿದ ಟ್ವೀಟ್‌ ಅನ್ನೂ ಜನ ಟ್ರೋಲ್ ಮಾಡುವುದಕ್ಕೆ ಬಳಸಿಕೊಂಡರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ಪಾಕಿಸ್ತಾನದ ಜತೆಗೆ ಯುದ್ಧ ಬೇಡ ಎಂದು ಹೇಳಿ ಪೇಚಿಗೆ ಸಿಲುಕಿದ್ದರು.
icon

(8 / 8)

ಕರ್ನಾಟಕ ಕಾಂಗ್ರೆಸ್ ಈಗಾಗಲೇ ಮಾಡಿದ ಎಡವಟ್ಟಿನ ಬಳಿಕ ಹಾಕಿದ ಟ್ವೀಟ್‌ ಅನ್ನೂ ಜನ ಟ್ರೋಲ್ ಮಾಡುವುದಕ್ಕೆ ಬಳಸಿಕೊಂಡರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ಪಾಕಿಸ್ತಾನದ ಜತೆಗೆ ಯುದ್ಧ ಬೇಡ ಎಂದು ಹೇಳಿ ಪೇಚಿಗೆ ಸಿಲುಕಿದ್ದರು.

Umesh Kumar S

TwittereMail
ಉಮೇಶ್ ಕುಮಾರ್ ಶಿಮ್ಲಡ್ಕ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದ ಸುದ್ದಿ ಸಂಪಾದಕ. ಜೀವನದ ಕಲಿಕಾರ್ಥಿ. ದೇಶ, ವಿದೇಶಗಳ ಪ್ರಸಕ್ತ ವಿದ್ಯಮಾನ, ವಾಣಿಜ್ಯ, ವಿಜ್ಞಾನ ತಂತ್ರಜ್ಞಾನ ಕುರಿತು ಕುತೂಹಲಿ. ಹೊಸ ದಿಗಂತ, ಉದಯವಾಣಿ, ವಿಜಯ ಕರ್ನಾಟಕ, ವಿಜಯವಾಣಿ ಪತ್ರಿಕೆಗಳು. ಏಷ್ಯಾನೆಟ್ ಸುವರ್ಣ, ಸಮಯ ಸುದ್ದಿವಾಹಿನಿಗಳ ವಿವಿಧ ವಿಭಾಗಗಳು ಸೇರಿ 20 ವರ್ಷಗಳಿಗೂ ಹೆಚ್ಚಿನ ಅನುಭವ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಿವಾಸಿ.

ಇತರ ಗ್ಯಾಲರಿಗಳು