ರಾಮನಗರ ಇನ್ನು ಬೆಂಗಳೂರು ದಕ್ಷಿಣ ಜಿಲ್ಲೆ: ಹಠ ಹಿಡಿದು ಗೆದ್ದ ಡಿಕೆಶಿ, ಕೆಂಗಲ್‌ ಹನುಮಂತಯ್ಯ ಹೆಸರಿಟ್ಟ ಊರಿನ ಮೊದಲ ಹೆಸರೇನು ಗೊತ್ತೆ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ರಾಮನಗರ ಇನ್ನು ಬೆಂಗಳೂರು ದಕ್ಷಿಣ ಜಿಲ್ಲೆ: ಹಠ ಹಿಡಿದು ಗೆದ್ದ ಡಿಕೆಶಿ, ಕೆಂಗಲ್‌ ಹನುಮಂತಯ್ಯ ಹೆಸರಿಟ್ಟ ಊರಿನ ಮೊದಲ ಹೆಸರೇನು ಗೊತ್ತೆ

ರಾಮನಗರ ಇನ್ನು ಬೆಂಗಳೂರು ದಕ್ಷಿಣ ಜಿಲ್ಲೆ: ಹಠ ಹಿಡಿದು ಗೆದ್ದ ಡಿಕೆಶಿ, ಕೆಂಗಲ್‌ ಹನುಮಂತಯ್ಯ ಹೆಸರಿಟ್ಟ ಊರಿನ ಮೊದಲ ಹೆಸರೇನು ಗೊತ್ತೆ

ಹಿಂದೆ ಬೆಂಗಳೂರಿನ ಭಾಗವಾಗಿ ಎರಡು ದಶಕದ ಹಿಂದೆ ಜಿಲ್ಲಾ ಕೇಂದ್ರದಿಂದ ಕರೆಯಲ್ಪಡುತ್ತಿದ್ದ ರಾಮನಗರ ಇನ್ನು ಬೆಂಗಳೂರು ದಕ್ಷಿಣ ಜಿಲ್ಲೆಯಾಗಲಿದೆ. ರಾಮನಗರ ಹಿಂದಿನಂತೆ ನಗರವಾಗಿ ಉಳಿಯಲಿದೆ.

ಕರ್ನಾಟಕದ ಜಿಲ್ಲಾ ಕೇಂದ್ರವಾದ ರಾಮನಗರದ ಹೆಸರು ಬದಲಾವಣೆ ಕೊನೆಗೂ ಆಗಿದೆ. ರಾಮನಗರ ಬದಲು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಬದಲಾಯಿಸುವ ನಿಟ್ಟಿನಲ್ಲಿ ಕೆಲ ವರ್ಷದಿಂದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ನಡೆಸಿದ್ದ ಪ್ರಯತ್ನ ಕೊನೆಗೂ ಕೈಗೂಡಿದೆ.
icon

(1 / 7)

ಕರ್ನಾಟಕದ ಜಿಲ್ಲಾ ಕೇಂದ್ರವಾದ ರಾಮನಗರದ ಹೆಸರು ಬದಲಾವಣೆ ಕೊನೆಗೂ ಆಗಿದೆ. ರಾಮನಗರ ಬದಲು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಬದಲಾಯಿಸುವ ನಿಟ್ಟಿನಲ್ಲಿ ಕೆಲ ವರ್ಷದಿಂದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ನಡೆಸಿದ್ದ ಪ್ರಯತ್ನ ಕೊನೆಗೂ ಕೈಗೂಡಿದೆ.

ರಾಮನಗರ ಜಿಲ್ಲೆ ಈ ಮೊದಲು ಬೆಂಗಳೂರು ಗ್ರಾಮಾಂತರ ಎಂದಿತ್ತು. ನಂತರ ಬೆಂಗಳೂರು ನಗರ ಜಿಲ್ಲೆ ಎಂದಾಗಿತ್ತು. ರಾಮನಗರದ ಹೆಸರನ್ನು ಉಳಿಸಿಕೊಳ್ಳಬೇಕೆಂಬ ಕಾರಣಕ್ಕೆ ಜಿಲ್ಲೆಯ ಎಲ್ಲಾ ಶಾಸಕರುಗಳು ಸೇರಿ ತೀರ್ಮಾನ ಕೈಗೊಂಡು, ಬೆಂಗಳೂರು ದಕ್ಷಿಣ ಜಿಲ್ಲೆಯೆಂದು ಮರು ನಾಮಕರಣ ಮಾಡಲು ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
icon

(2 / 7)

ರಾಮನಗರ ಜಿಲ್ಲೆ ಈ ಮೊದಲು ಬೆಂಗಳೂರು ಗ್ರಾಮಾಂತರ ಎಂದಿತ್ತು. ನಂತರ ಬೆಂಗಳೂರು ನಗರ ಜಿಲ್ಲೆ ಎಂದಾಗಿತ್ತು. ರಾಮನಗರದ ಹೆಸರನ್ನು ಉಳಿಸಿಕೊಳ್ಳಬೇಕೆಂಬ ಕಾರಣಕ್ಕೆ ಜಿಲ್ಲೆಯ ಎಲ್ಲಾ ಶಾಸಕರುಗಳು ಸೇರಿ ತೀರ್ಮಾನ ಕೈಗೊಂಡು, ಬೆಂಗಳೂರು ದಕ್ಷಿಣ ಜಿಲ್ಲೆಯೆಂದು ಮರು ನಾಮಕರಣ ಮಾಡಲು ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ರಾಮನಗರವೇ ಜಿಲ್ಲಾ ಕೇಂದ್ರ ಸ್ಥಾನ ಆಗಿರಲಿದೆ. ಇದರಲ್ಲಿ ಯಾವುದೇ ರೀತಿಯ ಬದಲಾವಣೆ ಇಲ್ಲ. ಆದರೆ, ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಸಂಪುಟ ಒಪ್ಪಿಗೆ ಸೂಚಿಸಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ವಿವರಣೆ ನೀಡಿದ್ಧಾರೆ.
icon

(3 / 7)

ರಾಮನಗರವೇ ಜಿಲ್ಲಾ ಕೇಂದ್ರ ಸ್ಥಾನ ಆಗಿರಲಿದೆ. ಇದರಲ್ಲಿ ಯಾವುದೇ ರೀತಿಯ ಬದಲಾವಣೆ ಇಲ್ಲ. ಆದರೆ, ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಸಂಪುಟ ಒಪ್ಪಿಗೆ ಸೂಚಿಸಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ವಿವರಣೆ ನೀಡಿದ್ಧಾರೆ.

ರಾಮನಗರ ಜಿಲ್ಲಾ ಕೇಂದ್ರವಾದರೂ ಬೆಂಗಳೂರಿನೊಂದಿಗೆ ಹೆಚ್ಚಿನ ಒಡನಾಟ ಹೊಂದಿದೆ. ಇದರಿಂದ ಈ ಜಿಲ್ಲೆಗೂ ಬೆಂಗಳೂರಿ ಹೆಸರೇ ಇರಬೇಕು. ಇದರಿಂದ ಎಲ್ಲಾ ರೀತಿಯಲ್ಲೂ ಸಹಾಯವಾಗಲಿದೆ ಎನ್ನುವ ಉದ್ದೇಶದೊಂದಿಗೆ ಡಿಕೆ ಶಿವಕುಮಾರ್‌ ಅವರು ಜಿಲ್ಲೆಯ ಹೆಸರು ಬದಲಿಸುವಲ್ಲಿ ಯಶಸ್ವಿಯಾಗಿದ್ದಾರೆ.
icon

(4 / 7)

ರಾಮನಗರ ಜಿಲ್ಲಾ ಕೇಂದ್ರವಾದರೂ ಬೆಂಗಳೂರಿನೊಂದಿಗೆ ಹೆಚ್ಚಿನ ಒಡನಾಟ ಹೊಂದಿದೆ. ಇದರಿಂದ ಈ ಜಿಲ್ಲೆಗೂ ಬೆಂಗಳೂರಿ ಹೆಸರೇ ಇರಬೇಕು. ಇದರಿಂದ ಎಲ್ಲಾ ರೀತಿಯಲ್ಲೂ ಸಹಾಯವಾಗಲಿದೆ ಎನ್ನುವ ಉದ್ದೇಶದೊಂದಿಗೆ ಡಿಕೆ ಶಿವಕುಮಾರ್‌ ಅವರು ಜಿಲ್ಲೆಯ ಹೆಸರು ಬದಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ರಾಮನಗರ ಜಿಲ್ಲೆಯನ್ನು ಹಿಂದಿನ ಬೆಂಗಳೂರಿನ ಗ್ರಾಮಾಂತರ ಜಿಲ್ಲೆಯಿಂದ 23 ಆಗಸ್ಟ್ 2007 ರಂದು ರಚಿಸಲಾಗಿದೆ. ಇದರಲ್ಲಿ ರಾಮನಗರ, ಚನ್ನಪಟ್ಟಣ, ಕನಕಪುರ, ಮಾಗಡಿ ಮತ್ತು ಹಾರೋಹಳ್ಳಿ ತಾಲ್ಲೂಕುಗಳು ಸೇರಿವೆ. ಇತ್ತಿಚೆಗೆ 2024ರಲ್ಲಿ ಕನಕಪುರ ತಾಲೂಕಿನಿಂದ ಹಾರೋಹಳ್ಳಿಯನ್ನು ಬೇರ್ಪಡಿಸಿ ಹೊಸ ತಾಲೂಕಾಗಿ ಮಾಡಲಾಗಿದೆ. ರಾಮನಗರ ಜಿಲ್ಲೆಯು ರೇಷ್ಮೆ ನಾಡು ಎಂದು ಪ್ರಸಿದ್ಧಿ ಪಡೆದಿದ್ದು, ಏಷ್ಯಾದಲ್ಲೇ ಅತಿದೊಡ್ಡ ರೇಷ್ಮೆ ಮಾರುಕಟ್ಟೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
icon

(5 / 7)

ರಾಮನಗರ ಜಿಲ್ಲೆಯನ್ನು ಹಿಂದಿನ ಬೆಂಗಳೂರಿನ ಗ್ರಾಮಾಂತರ ಜಿಲ್ಲೆಯಿಂದ 23 ಆಗಸ್ಟ್ 2007 ರಂದು ರಚಿಸಲಾಗಿದೆ. ಇದರಲ್ಲಿ ರಾಮನಗರ, ಚನ್ನಪಟ್ಟಣ, ಕನಕಪುರ, ಮಾಗಡಿ ಮತ್ತು ಹಾರೋಹಳ್ಳಿ ತಾಲ್ಲೂಕುಗಳು ಸೇರಿವೆ. ಇತ್ತಿಚೆಗೆ 2024ರಲ್ಲಿ ಕನಕಪುರ ತಾಲೂಕಿನಿಂದ ಹಾರೋಹಳ್ಳಿಯನ್ನು ಬೇರ್ಪಡಿಸಿ ಹೊಸ ತಾಲೂಕಾಗಿ ಮಾಡಲಾಗಿದೆ. ರಾಮನಗರ ಜಿಲ್ಲೆಯು ರೇಷ್ಮೆ ನಾಡು ಎಂದು ಪ್ರಸಿದ್ಧಿ ಪಡೆದಿದ್ದು, ಏಷ್ಯಾದಲ್ಲೇ ಅತಿದೊಡ್ಡ ರೇಷ್ಮೆ ಮಾರುಕಟ್ಟೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ರಾಮನಗರ ಎಂಬುದು ಭಾರತದ ರಾಜ್ಯ ಕರ್ನಾಟಕದ ಪಟ್ಟಣ ಮತ್ತು ನಗರ ಪುರಸಭೆ. ಇದು ರಾಮನಗರ ಜಿಲ್ಲೆಯ ಪ್ರಧಾನ ಕಛೇರಿಯಾಗಿದೆ. ಟಿಪ್ಪು ಸುಲ್ತಾನ್ ಆಡಳಿತದ ಸಮಯದಲ್ಲಿ ಈ ಪಟ್ಟಣವನ್ನು ಶಂಸೆರಾಬಾದ್ ಎಂದು ಕರೆಯಲಾಗುತ್ತಿತ್ತು. ನಂತರ ಇದನ್ನು ಸ್ವಾತಂತ್ರ್ಯ ಪೂರ್ವದಲ್ಲಿ ಸರ್ ಬ್ಯಾರಿ ಕ್ಲೋಸ್ (1756-1813) ನಂತರ ಕ್ಲೋಸೆಪ್ಟ್ ಎಂದು ಕರೆಯಲಾಯಿತು. ಈ ಊರಿಗೆ ಕರ್ನಾಟಕ ರಾಜ್ಯದ ಮಾಜಿ  ಮುಖ್ಯಮಂತ್ರಿ ಕಂಗಲ್ ಹನುಮಂತಯ್ಯ ಅವರು ರಾಮನಗರ ಎಂದು ಮರುನಾಮಕರಣ ಮಾಡಿದರು.
icon

(6 / 7)

ರಾಮನಗರ ಎಂಬುದು ಭಾರತದ ರಾಜ್ಯ ಕರ್ನಾಟಕದ ಪಟ್ಟಣ ಮತ್ತು ನಗರ ಪುರಸಭೆ. ಇದು ರಾಮನಗರ ಜಿಲ್ಲೆಯ ಪ್ರಧಾನ ಕಛೇರಿಯಾಗಿದೆ. ಟಿಪ್ಪು ಸುಲ್ತಾನ್ ಆಡಳಿತದ ಸಮಯದಲ್ಲಿ ಈ ಪಟ್ಟಣವನ್ನು ಶಂಸೆರಾಬಾದ್ ಎಂದು ಕರೆಯಲಾಗುತ್ತಿತ್ತು. ನಂತರ ಇದನ್ನು ಸ್ವಾತಂತ್ರ್ಯ ಪೂರ್ವದಲ್ಲಿ ಸರ್ ಬ್ಯಾರಿ ಕ್ಲೋಸ್ (1756-1813) ನಂತರ ಕ್ಲೋಸೆಪ್ಟ್ ಎಂದು ಕರೆಯಲಾಯಿತು. ಈ ಊರಿಗೆ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಕಂಗಲ್ ಹನುಮಂತಯ್ಯ ಅವರು ರಾಮನಗರ ಎಂದು ಮರುನಾಮಕರಣ ಮಾಡಿದರು.

ಜೆಡಿಎಸ್ - ಬಿಜೆಪಿ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಅಂದಿನ ಮುಖ್ಯಮಂತ್ರಿಯಾಗಿದ್ದ ಹೆಚ್.ಡಿ.ಕುಮಾರಸ್ವಾಮಿರವರ ದಿಟ್ಟ ನಿರ್ಧಾರದ ಫಲವಾಗಿ 2007ರ ಆಗಸ್ಟ್ 23ರಂದು 29ನೇ ಜಿಲ್ಲೆಯಾಗಿ ರಾಮನಗರ ರೂಪ ತಾಳಿತು. ಡಿಕೆಶಿ ಅವರು ಡಿಸಿಎಂ ಆದ ಬಳಿಕ ರಾಮನಗರಕ್ಕೆ ಬೆಂಗಳೂರು ದಕ್ಷಿಣ ಎನ್ನುವ ಹೆಸರು ನೀಡಿದ್ದಾರೆ.
icon

(7 / 7)

ಜೆಡಿಎಸ್ - ಬಿಜೆಪಿ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಅಂದಿನ ಮುಖ್ಯಮಂತ್ರಿಯಾಗಿದ್ದ ಹೆಚ್.ಡಿ.ಕುಮಾರಸ್ವಾಮಿರವರ ದಿಟ್ಟ ನಿರ್ಧಾರದ ಫಲವಾಗಿ 2007ರ ಆಗಸ್ಟ್ 23ರಂದು 29ನೇ ಜಿಲ್ಲೆಯಾಗಿ ರಾಮನಗರ ರೂಪ ತಾಳಿತು. ಡಿಕೆಶಿ ಅವರು ಡಿಸಿಎಂ ಆದ ಬಳಿಕ ರಾಮನಗರಕ್ಕೆ ಬೆಂಗಳೂರು ದಕ್ಷಿಣ ಎನ್ನುವ ಹೆಸರು ನೀಡಿದ್ದಾರೆ.

ಕುಂದೂರು ಉಮೇಶಭಟ್ಟ ಪಿ.ಎಚ್.: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಡೆಪ್ಯುಟಿ ಚೀಫ್ ಕಂಟೆಂಟ್ ಪ್ರೊಡ್ಯೂಸರ್. ವಿಜಯ ಕರ್ನಾಟಕದಲ್ಲಿ ವಿಜಯಪುರ ಬ್ಯೂರೊ ಚೀಫ್ ಸೇರಿ ಹಲವು ಮಹತ್ವದ ಹುದ್ದೆಗಳ ನಿರ್ವಹಣೆ. ಮಲೆನಾಡು ಮಿತ್ರ, ಆಂದೋಲನ ಸೇರಿ ವಿವಿಧ ಪತ್ರಿಕೆಗಳಲ್ಲಿ 25 ವರ್ಷಗಳ ಅನುಭವ. ಪರಿಸರ, ಅರಣ್ಯ, ವನ್ಯಜೀವಿ, ಅಭಿವೃದ್ದಿ, ರಾಜಕೀಯ ಆಸಕ್ತಿ ಕ್ಷೇತ್ರಗಳು. 'ಕಾಡಿನ ಕಥೆಗಳು' ಅಂಕಣ ಬರೆಯುತ್ತಿದ್ದಾರೆ. ದಾವಣಗೆರೆ ಜಿಲ್ಲೆಯ ಕುಂದೂರು ಸ್ವಂತ ಊರು. ಸದ್ಯಕ್ಕೆ ಮೈಸೂರು ನಿವಾಸಿ.

ಇತರ ಗ್ಯಾಲರಿಗಳು