ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಕೇಸ್‌ ಸಿಸಿಬಿಗೆ; ಇದುವರೆಗೆ ಏನೇನಾಯಿತು ಇಲ್ಲಿದೆ ಕಿರು ಚಿತ್ರನೋಟ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಕೇಸ್‌ ಸಿಸಿಬಿಗೆ; ಇದುವರೆಗೆ ಏನೇನಾಯಿತು ಇಲ್ಲಿದೆ ಕಿರು ಚಿತ್ರನೋಟ

ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಕೇಸ್‌ ಸಿಸಿಬಿಗೆ; ಇದುವರೆಗೆ ಏನೇನಾಯಿತು ಇಲ್ಲಿದೆ ಕಿರು ಚಿತ್ರನೋಟ

ಕರ್ನಾಟಕ ನಿವೃತ್ತ ಪೊಲೀಸ್‌ ಮಹಾನಿರ್ದೇಶಕ ಓಂ ಪ್ರಕಾಶ್‌ ಕೊಲೆ ಕೇಸ್‌ನಲ್ಲಿ ಅವರ ಪತ್ನಿ ಪಲ್ಲವಿ (64) ಅವರನ್ನು ಹೆಚ್‌ಎಸ್‌ಆರ್‌ ಲೇಔಟ್‌ ಠಾಣೆಯ ಪೊಲೀಸರು ಸೋಮವಾರ (ಏ 21) ರಾತ್ರಿ ಬಂಧಿಸಿ ತಡರಾತ್ರಿ 39ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆರೋಪಿಗೆ ಮೇ 3 ರ ತನಕ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇದುವರೆಗೆ ಏನೇನಾಯಿತು? ಕಿರು ಚಿತ್ರನೋಟ ಇಲ್ಲಿದೆ.

ಕರ್ನಾಟಕ ನಿವೃತ್ತ ಪೊಲೀಸ್‌ ಮಹಾನಿರ್ದೇಶಕ ಓಂ ಪ್ರಕಾಶ್‌ ಕೊಲೆ ಕೇಸ್‌ನಲ್ಲಿ ಅವರ ಪುತ್ರ ಕಾರ್ತಿಕೇಶ್ ನೀಡಿದ ದೂರಿನ ಪ್ರಕಾರ, ಪೊಲೀಸರು ಅವರ ಪತ್ನಿ ಪಲ್ಲವಿಯನ್ನು ಬಂಧಿಸಿದ್ದಾರೆ. ಪುತ್ರಿ ಕೃತಿಯ ವಿರುದ್ಧವೂ ಆರೋಪ ಇದ್ದು, ಆಕೆ ಅಸ್ವಸ್ಥಗೊಂಡಿರುವ ಕಾರಣ ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ನಡುವೆ, ಹೆಚ್‌ಎಸ್ಆರ್ ಲೇಔಟ್ ಪೊಲೀಸರು ಈ ಕೇಸ್‌ನ ಕಡತಗಳನ್ನು ಸಿಸಿಬಿಗೆ ಹಸ್ತಾಂತರಿಸಲಿದ್ದಾರೆ. ಮುಂದಿನ ತನಿಖೆಯನ್ನು ಸಿಸಿಬಿ ನಡೆಸಲಿದೆ.
icon

(1 / 12)

ಕರ್ನಾಟಕ ನಿವೃತ್ತ ಪೊಲೀಸ್‌ ಮಹಾನಿರ್ದೇಶಕ ಓಂ ಪ್ರಕಾಶ್‌ ಕೊಲೆ ಕೇಸ್‌ನಲ್ಲಿ ಅವರ ಪುತ್ರ ಕಾರ್ತಿಕೇಶ್ ನೀಡಿದ ದೂರಿನ ಪ್ರಕಾರ, ಪೊಲೀಸರು ಅವರ ಪತ್ನಿ ಪಲ್ಲವಿಯನ್ನು ಬಂಧಿಸಿದ್ದಾರೆ. ಪುತ್ರಿ ಕೃತಿಯ ವಿರುದ್ಧವೂ ಆರೋಪ ಇದ್ದು, ಆಕೆ ಅಸ್ವಸ್ಥಗೊಂಡಿರುವ ಕಾರಣ ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ನಡುವೆ, ಹೆಚ್‌ಎಸ್ಆರ್ ಲೇಔಟ್ ಪೊಲೀಸರು ಈ ಕೇಸ್‌ನ ಕಡತಗಳನ್ನು ಸಿಸಿಬಿಗೆ ಹಸ್ತಾಂತರಿಸಲಿದ್ದಾರೆ. ಮುಂದಿನ ತನಿಖೆಯನ್ನು ಸಿಸಿಬಿ ನಡೆಸಲಿದೆ.

ಓಂ ಪ್ರಕಾಶ್ ಅವರ ಪುತ್ರ ಕಾರ್ತಿಕೇಶ್ ಅವರ ದೂರು ಆಧರಿಸಿ, ಪೊಲೀಸರು  ಮೃತರ ಪತ್ನಿ ಪಲ್ಲವಿ ಮತ್ತು ಮಗಳು ಕೃತಿ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡು, ವಿಚಾರಣೆ ನಡೆಸುತ್ತಿದ್ದಾರೆ. ಕೃತ್ಯ ನಡೆದ ಸ್ಥಳ ದಲ್ಲಿ ಪಿಸ್ತೂಲ್, ಚಾಕು ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
icon

(2 / 12)

ಓಂ ಪ್ರಕಾಶ್ ಅವರ ಪುತ್ರ ಕಾರ್ತಿಕೇಶ್ ಅವರ ದೂರು ಆಧರಿಸಿ, ಪೊಲೀಸರು ಮೃತರ ಪತ್ನಿ ಪಲ್ಲವಿ ಮತ್ತು ಮಗಳು ಕೃತಿ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡು, ವಿಚಾರಣೆ ನಡೆಸುತ್ತಿದ್ದಾರೆ. ಕೃತ್ಯ ನಡೆದ ಸ್ಥಳ ದಲ್ಲಿ ಪಿಸ್ತೂಲ್, ಚಾಕು ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಕೃತ್ಯದ ಕುರಿತು ಇಬ್ಬರಿಂದಲೂ ಹೇಳಿಕೆ ಪಡೆದುಕೊಂಡ ಬಳಿಕ ಭಾನುವಾರ ರಾತ್ರಿ ಮಹಿಳಾ ಸಾಂತ್ವನ‌ ಕೇಂದ್ರದಲ್ಲಿ ಉಳಿಸಲಾಗಿತ್ತು. ಸೋಮವಾರ ಬೆಳಿಗ್ಗೆ ಇಬ್ಬರನ್ನೂ ಠಾಣೆಗೆ ಕರೆತಂದಾಗ ರಂಪಾಟ ನಡೆಸಿದರು.‌ಕೊನೆಗೂ ಅವರನ್ನು ಮನವೊಲಿಸಿ ಕೆಳಕ್ಕೆ ಇಳಿಸಿ ವಿಚಾರಣೆಗೆ ಕರೆದೊಯ್ದರು. ವಿಧಿ ವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಬೆರಳಚ್ಚು ಪಡೆಯುವಾಗಲೂ ಸಹಕರಿಸಲಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
icon

(3 / 12)

ಕೃತ್ಯದ ಕುರಿತು ಇಬ್ಬರಿಂದಲೂ ಹೇಳಿಕೆ ಪಡೆದುಕೊಂಡ ಬಳಿಕ ಭಾನುವಾರ ರಾತ್ರಿ ಮಹಿಳಾ ಸಾಂತ್ವನ‌ ಕೇಂದ್ರದಲ್ಲಿ ಉಳಿಸಲಾಗಿತ್ತು. ಸೋಮವಾರ ಬೆಳಿಗ್ಗೆ ಇಬ್ಬರನ್ನೂ ಠಾಣೆಗೆ ಕರೆತಂದಾಗ ರಂಪಾಟ ನಡೆಸಿದರು.‌ಕೊನೆಗೂ ಅವರನ್ನು ಮನವೊಲಿಸಿ ಕೆಳಕ್ಕೆ ಇಳಿಸಿ ವಿಚಾರಣೆಗೆ ಕರೆದೊಯ್ದರು. ವಿಧಿ ವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಬೆರಳಚ್ಚು ಪಡೆಯುವಾಗಲೂ ಸಹಕರಿಸಲಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
(PTI)

ಸೋಮವಾರ ಬೆಳಗ್ಗೆ ಪೊಲೀಸರು ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಓಂ ಪ್ರಕಾಶ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆ ಮಾಡಿಸಿ ಕುಟುಂಬಕ್ಕೆ ಹಸ್ತಾಂತರಿಸಿದರು. ಬಳಿಕ ಎಚ್‌ಎಸ್‌ಆರ್ ಲೇಔಟ್‌ನ ಎಂಸಿಎಚ್‌ಎಸ್ ಕ್ಲಬ್ ಆವರಣದಲ್ಲಿ ಮೃತದೇಹವನ್ನು ಸಾರ್ವಜನಿಕ ದರ್ಶನಕ್ಕೆ ಇರಿಸಲಾಗಿತ್ತು.
icon

(4 / 12)

ಸೋಮವಾರ ಬೆಳಗ್ಗೆ ಪೊಲೀಸರು ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಓಂ ಪ್ರಕಾಶ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆ ಮಾಡಿಸಿ ಕುಟುಂಬಕ್ಕೆ ಹಸ್ತಾಂತರಿಸಿದರು. ಬಳಿಕ ಎಚ್‌ಎಸ್‌ಆರ್ ಲೇಔಟ್‌ನ ಎಂಸಿಎಚ್‌ಎಸ್ ಕ್ಲಬ್ ಆವರಣದಲ್ಲಿ ಮೃತದೇಹವನ್ನು ಸಾರ್ವಜನಿಕ ದರ್ಶನಕ್ಕೆ ಇರಿಸಲಾಗಿತ್ತು.
(PTI)

ಕುಟುಂಬದ ಸದಸ್ಯರು, ಸಂಬಂಧಿಕರು, ಪೊಲೀಸ್ ಅಧಿಕಾರಿಗಳು, ಕೆಲ ಐಎಎಸ್ ಅಧಿಕಾರಿಗಳು, ಮಾಜಿ ಪೊಲೀಸ್ ಅಧಿಕಾರಿಗಳು, ಸ್ನೇಹಿತರು- ಆಪ್ತರು ಸೇರಿ ನಗರದ ವಿವಿಧೆಡೆಯಿಂದ ಆಗಮಿಸಿದ್ದ ಸಾರ್ವಜನಿಕರು ಓಂಪ್ರಕಾಶ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಈ ವೇಳೆ ಪ್ರಾರ್ಥಿವ ಶರೀರಕ್ಕೆ ಪೊಲೀಸ್‌ ಗೌರವ ವಂದನೆ ಸೂಚಿಸಲಾಯಿತು.
icon

(5 / 12)

ಕುಟುಂಬದ ಸದಸ್ಯರು, ಸಂಬಂಧಿಕರು, ಪೊಲೀಸ್ ಅಧಿಕಾರಿಗಳು, ಕೆಲ ಐಎಎಸ್ ಅಧಿಕಾರಿಗಳು, ಮಾಜಿ ಪೊಲೀಸ್ ಅಧಿಕಾರಿಗಳು, ಸ್ನೇಹಿತರು- ಆಪ್ತರು ಸೇರಿ ನಗರದ ವಿವಿಧೆಡೆಯಿಂದ ಆಗಮಿಸಿದ್ದ ಸಾರ್ವಜನಿಕರು ಓಂಪ್ರಕಾಶ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಈ ವೇಳೆ ಪ್ರಾರ್ಥಿವ ಶರೀರಕ್ಕೆ ಪೊಲೀಸ್‌ ಗೌರವ ವಂದನೆ ಸೂಚಿಸಲಾಯಿತು.
(PTI)

ಓಂ ಪ್ರಕಾಶ್ ಅವರ ಪಾರ್ಥಿವ ಶರೀರದ ಎದುರು ದುಃಖತಪ್ತ ಕುಟುಂಬ ಸದಸ್ಯರು
icon

(6 / 12)

ಓಂ ಪ್ರಕಾಶ್ ಅವರ ಪಾರ್ಥಿವ ಶರೀರದ ಎದುರು ದುಃಖತಪ್ತ ಕುಟುಂಬ ಸದಸ್ಯರು
(PTI)

ಮನೆಗೆ ಹೋಗಬೇಡ ಎಂದು ಪರಿಪರಿಯಾಗಿ ಬೇಡಿಕೊಂಡೆ. ಕೇಳಲಿಲ್ಲ ಎಂದು ಓಂ ಪ್ರಕಾಶ್ ಅವರ ಸಹೋದರಿ ಸರಿತಾ ಕುಮಾರಿ ಕಣ್ಣೀರಾದರು.
icon

(7 / 12)

ಮನೆಗೆ ಹೋಗಬೇಡ ಎಂದು ಪರಿಪರಿಯಾಗಿ ಬೇಡಿಕೊಂಡೆ. ಕೇಳಲಿಲ್ಲ ಎಂದು ಓಂ ಪ್ರಕಾಶ್ ಅವರ ಸಹೋದರಿ ಸರಿತಾ ಕುಮಾರಿ ಕಣ್ಣೀರಾದರು.
(PTI)

ಪೊಲೀಸ್‌ ಮಹಾನಿರ್ದೇಶಕ ಅಲೋಕ್ ಮೋಹನ್, ನಗರ ಪೊಲೀಸ್ ಆಯುಕ ಬಿ.ದಯಾನಂದ್, ಐಎಎಸ್ ಅಧಿಕಾರಿ ಉಮಾಶಂಕರ್, ನಿವೃತ್ತ ಡಿಜಿಪಿ ಭಾಸ್ಕರ್ ರಾವ್ ಸೇರಿ ಹಿರಿಯ ಹಾಗೂ ನಿವೃತ್ತ ಅಧಿಕಾ ರಿಗಳು ಓಂ ಪ್ರಕಾಶ್ ಅವರ ಪ್ರಾರ್ಥಿವ ಶರೀರಕ್ಕೆ ಹೂಗುಚ್ಛ ಇರಿಸಿ ಅಂತಿಮ ನಮನ ಸಲ್ಲಿಸಿದರು. ಬಳಿಕ ಪುತ್ರ ಕಾರ್ತಿಕೇಶ್ ಹಾಗೂ ಕುಟುಂಬಸ್ಥರು ಬಿಹಾರಿ ಸಾಂಪ್ರದಾಯದಂತೆ ಪಾರ್ಥಿವ ಶರೀರಕ್ಕೆ ಪೂಜೆ ಸಲ್ಲಿಸಿದರು. ಅಂತಿಮ ಸಂಸ್ಕಾರ ನೆರವೇರಿಸಿದರು.
icon

(8 / 12)

ಪೊಲೀಸ್‌ ಮಹಾನಿರ್ದೇಶಕ ಅಲೋಕ್ ಮೋಹನ್, ನಗರ ಪೊಲೀಸ್ ಆಯುಕ ಬಿ.ದಯಾನಂದ್, ಐಎಎಸ್ ಅಧಿಕಾರಿ ಉಮಾಶಂಕರ್, ನಿವೃತ್ತ ಡಿಜಿಪಿ ಭಾಸ್ಕರ್ ರಾವ್ ಸೇರಿ ಹಿರಿಯ ಹಾಗೂ ನಿವೃತ್ತ ಅಧಿಕಾ ರಿಗಳು ಓಂ ಪ್ರಕಾಶ್ ಅವರ ಪ್ರಾರ್ಥಿವ ಶರೀರಕ್ಕೆ ಹೂಗುಚ್ಛ ಇರಿಸಿ ಅಂತಿಮ ನಮನ ಸಲ್ಲಿಸಿದರು. ಬಳಿಕ ಪುತ್ರ ಕಾರ್ತಿಕೇಶ್ ಹಾಗೂ ಕುಟುಂಬಸ್ಥರು ಬಿಹಾರಿ ಸಾಂಪ್ರದಾಯದಂತೆ ಪಾರ್ಥಿವ ಶರೀರಕ್ಕೆ ಪೂಜೆ ಸಲ್ಲಿಸಿದರು. ಅಂತಿಮ ಸಂಸ್ಕಾರ ನೆರವೇರಿಸಿದರು.
(HT_PRINT)

ಓಂ ಪ್ರಕಾಶ್ ಅವರ ಮೇಲೆ ಖಾರದಪುಡಿ ಎರಚಿ, ಬಳಿಕ ಅಡುಗೆ ಎಣ್ಣೆಯನ್ನೂ ಸುರಿಯಲಾಗಿದೆ. ಕೈ–ಕಾಲು ಕಟ್ಟಿ ಚಾಕುವಿನಿಂದ ಚುಚ್ಚಿ ಕೊಲೆ ಮಾಡಲಾಗಿದೆ. ದೇಹದಲ್ಲಿ 10 ಕಡೆ ಇರಿದ ಗುರುತುಗಳು ಮರಣೋತ್ತರ ಪರೀಕ್ಷೆಯಲ್ಲಿ ಪತ್ತೆಯಾಗಿವೆ. ಮನೆಯಲ್ಲಿದ್ದ ಮೂರು ಮೊಬೈಲ್‌ ಫೋನ್‌ ಜಪ್ತಿ ಮಾಡಲಾಗಿದೆ. ಮೊಬೈಲ್‌ಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ. ಮೊಬೈಲ್‌ ಹಾಗೂ ಚಾಕುವಿನ ಮೇಲೆ ಬಿದ್ದಿದ್ದ ಬೆರಳಚ್ಚು ಮಾದರಿಯನ್ನು ತಜ್ಞರು ಸಂಗ್ರಹಿಸಿದ್ದಾರೆ’ ಎಂದು ಪೊಲೀಸ್‌ ಮೂಲಗಳು ಹೇಳಿವೆ
icon

(9 / 12)

ಓಂ ಪ್ರಕಾಶ್ ಅವರ ಮೇಲೆ ಖಾರದಪುಡಿ ಎರಚಿ, ಬಳಿಕ ಅಡುಗೆ ಎಣ್ಣೆಯನ್ನೂ ಸುರಿಯಲಾಗಿದೆ. ಕೈ–ಕಾಲು ಕಟ್ಟಿ ಚಾಕುವಿನಿಂದ ಚುಚ್ಚಿ ಕೊಲೆ ಮಾಡಲಾಗಿದೆ. ದೇಹದಲ್ಲಿ 10 ಕಡೆ ಇರಿದ ಗುರುತುಗಳು ಮರಣೋತ್ತರ ಪರೀಕ್ಷೆಯಲ್ಲಿ ಪತ್ತೆಯಾಗಿವೆ. ಮನೆಯಲ್ಲಿದ್ದ ಮೂರು ಮೊಬೈಲ್‌ ಫೋನ್‌ ಜಪ್ತಿ ಮಾಡಲಾಗಿದೆ. ಮೊಬೈಲ್‌ಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ. ಮೊಬೈಲ್‌ ಹಾಗೂ ಚಾಕುವಿನ ಮೇಲೆ ಬಿದ್ದಿದ್ದ ಬೆರಳಚ್ಚು ಮಾದರಿಯನ್ನು ತಜ್ಞರು ಸಂಗ್ರಹಿಸಿದ್ದಾರೆ’ ಎಂದು ಪೊಲೀಸ್‌ ಮೂಲಗಳು ಹೇಳಿವೆ
(PTI)

ಓಂ ಪ್ರಕಾಶ್ ಅವರ ಮೇಲೆ ಖಾರದಪುಡಿ ಎರಚಿ, ಬಳಿಕ ಅಡುಗೆ ಎಣ್ಣೆಯನ್ನೂ ಸುರಿಯಲಾಗಿದೆ. ಕೈ–ಕಾಲು ಕಟ್ಟಿ ಚಾಕುವಿನಿಂದ ಚುಚ್ಚಿ ಕೊಲೆ ಮಾಡಲಾಗಿದೆ. ದೇಹದಲ್ಲಿ 10 ಕಡೆ ಇರಿದ ಗುರುತುಗಳು ಮರಣೋತ್ತರ ಪರೀಕ್ಷೆಯಲ್ಲಿ ಪತ್ತೆಯಾಗಿವೆ ಎಂದು ಪೊಲೀಸರು ಹೇಳಿದರು.
icon

(10 / 12)

ಓಂ ಪ್ರಕಾಶ್ ಅವರ ಮೇಲೆ ಖಾರದಪುಡಿ ಎರಚಿ, ಬಳಿಕ ಅಡುಗೆ ಎಣ್ಣೆಯನ್ನೂ ಸುರಿಯಲಾಗಿದೆ. ಕೈ–ಕಾಲು ಕಟ್ಟಿ ಚಾಕುವಿನಿಂದ ಚುಚ್ಚಿ ಕೊಲೆ ಮಾಡಲಾಗಿದೆ. ದೇಹದಲ್ಲಿ 10 ಕಡೆ ಇರಿದ ಗುರುತುಗಳು ಮರಣೋತ್ತರ ಪರೀಕ್ಷೆಯಲ್ಲಿ ಪತ್ತೆಯಾಗಿವೆ ಎಂದು ಪೊಲೀಸರು ಹೇಳಿದರು.
(PTI)

ಓಂ ಪ್ರಕಾಶ್ ಅವರು 1996–98ರಲ್ಲಿ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದಾಗ ಜೊಯಿಡಾ ತಾಲ್ಲೂಕಿನಲ್ಲಿ ದಟ್ಟ ಕಾಡಿನ ನಡುವೆ, ಕಾಳಿ ನದಿಯ ಅಂಚಿನಲ್ಲಿ ಹತ್ತಾರು ಎಕರೆ ಜಮೀನು ಖರೀದಿಸಿದ್ದರು. ಈ ಜಾಗದಲ್ಲಿ ಬಹುಪಾಲು ಆಸ್ತಿ ಅವರ ಪುತ್ರ ಕಾರ್ತಿಕೇಶ್ ಹೆಸರಿನಲ್ಲಿದೆ. ಒಂದು ಪಾಲನ್ನು ಸಹೋದರಿಯ ಹೆಸರಿಗೆ ಮಾಡುವ ಚಿಂತನೆ ನಡೆಸಿದ್ದರು ಎನ್ನಲಾಗಿದೆ. ಇದೇ ವಿಚಾರಕ್ಕೆ ಪತ್ನಿ, ಪುತ್ರಿ ವಿರೋಧ ವ್ಯಕ್ತಪಡಿಸಿದ್ದರು ಎಂದು ಆರೋಪಿಸಲಾಗುತ್ತಿದೆ. ಇದುವೆ ಕೊಲೆಗೆ ಕಾರಣವಿರಬಹುದು ಎಂದು ಶಂಕಿಸಲಾಗಿದೆ. (ಸಾಂಕೇತಿಕ ಚಿತ್ರ)
icon

(11 / 12)

ಓಂ ಪ್ರಕಾಶ್ ಅವರು 1996–98ರಲ್ಲಿ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದಾಗ ಜೊಯಿಡಾ ತಾಲ್ಲೂಕಿನಲ್ಲಿ ದಟ್ಟ ಕಾಡಿನ ನಡುವೆ, ಕಾಳಿ ನದಿಯ ಅಂಚಿನಲ್ಲಿ ಹತ್ತಾರು ಎಕರೆ ಜಮೀನು ಖರೀದಿಸಿದ್ದರು. ಈ ಜಾಗದಲ್ಲಿ ಬಹುಪಾಲು ಆಸ್ತಿ ಅವರ ಪುತ್ರ ಕಾರ್ತಿಕೇಶ್ ಹೆಸರಿನಲ್ಲಿದೆ. ಒಂದು ಪಾಲನ್ನು ಸಹೋದರಿಯ ಹೆಸರಿಗೆ ಮಾಡುವ ಚಿಂತನೆ ನಡೆಸಿದ್ದರು ಎನ್ನಲಾಗಿದೆ. ಇದೇ ವಿಚಾರಕ್ಕೆ ಪತ್ನಿ, ಪುತ್ರಿ ವಿರೋಧ ವ್ಯಕ್ತಪಡಿಸಿದ್ದರು ಎಂದು ಆರೋಪಿಸಲಾಗುತ್ತಿದೆ. ಇದುವೆ ಕೊಲೆಗೆ ಕಾರಣವಿರಬಹುದು ಎಂದು ಶಂಕಿಸಲಾಗಿದೆ. (ಸಾಂಕೇತಿಕ ಚಿತ್ರ)
(Pixabay )

ಪದೇಪದೆ ಗನ್‌ ತೋರಿಸಿ ನನಗೆ ಹಾಗೂ ಪುತ್ರಿಗೆ ಬೆದರಿಕೆ ಹಾಕುತ್ತಿದ್ದರು.ಶೂಟ್ ಮಾಡುವುದಾಗಿ ಹೇಳುತ್ತಿದ್ದರು. ಒಂದು ವಾರದಿಂದ ಈಚೆಗೆ ಮನೆಯಲ್ಲಿ ಜಗಳ ವಿಕೋಪಕ್ಕೆ ತಿರುಗಿತ್ತು. ಇದು ಭಾನುವಾರ ಅವರ ಕೊಲೆಗೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ. ತಾಯಿ ಮತ್ತು ತಂಗಿ ಸೇರಿ ಹತ್ಯೆ ನಡೆಸಿದ್ದಾರೆ ಎಂದು ಓಂ ಪ್ರಕಾಶ್ ಪುತ್ರ ಕಾರ್ತಿಕೇಶ್ ದೂರು ನೀಡಿದ್ದಾರೆ. ಈ ಕೇಸ್‌ನ ತನಿಖೆ ಮುಂದುವರಿದಿದೆ.
icon

(12 / 12)

ಪದೇಪದೆ ಗನ್‌ ತೋರಿಸಿ ನನಗೆ ಹಾಗೂ ಪುತ್ರಿಗೆ ಬೆದರಿಕೆ ಹಾಕುತ್ತಿದ್ದರು.ಶೂಟ್ ಮಾಡುವುದಾಗಿ ಹೇಳುತ್ತಿದ್ದರು. ಒಂದು ವಾರದಿಂದ ಈಚೆಗೆ ಮನೆಯಲ್ಲಿ ಜಗಳ ವಿಕೋಪಕ್ಕೆ ತಿರುಗಿತ್ತು. ಇದು ಭಾನುವಾರ ಅವರ ಕೊಲೆಗೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ. ತಾಯಿ ಮತ್ತು ತಂಗಿ ಸೇರಿ ಹತ್ಯೆ ನಡೆಸಿದ್ದಾರೆ ಎಂದು ಓಂ ಪ್ರಕಾಶ್ ಪುತ್ರ ಕಾರ್ತಿಕೇಶ್ ದೂರು ನೀಡಿದ್ದಾರೆ. ಈ ಕೇಸ್‌ನ ತನಿಖೆ ಮುಂದುವರಿದಿದೆ.
(PTI)

Umesh Kumar S

TwittereMail
ಉಮೇಶ್ ಕುಮಾರ್ ಶಿಮ್ಲಡ್ಕ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದ ಸುದ್ದಿ ಸಂಪಾದಕ. ಜೀವನದ ಕಲಿಕಾರ್ಥಿ. ದೇಶ, ವಿದೇಶಗಳ ಪ್ರಸಕ್ತ ವಿದ್ಯಮಾನ, ವಾಣಿಜ್ಯ, ವಿಜ್ಞಾನ ತಂತ್ರಜ್ಞಾನ ಕುರಿತು ಕುತೂಹಲಿ. ಹೊಸ ದಿಗಂತ, ಉದಯವಾಣಿ, ವಿಜಯ ಕರ್ನಾಟಕ, ವಿಜಯವಾಣಿ ಪತ್ರಿಕೆಗಳು. ಏಷ್ಯಾನೆಟ್ ಸುವರ್ಣ, ಸಮಯ ಸುದ್ದಿವಾಹಿನಿಗಳ ವಿವಿಧ ವಿಭಾಗಗಳು ಸೇರಿ 20 ವರ್ಷಗಳಿಗೂ ಹೆಚ್ಚಿನ ಅನುಭವ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಿವಾಸಿ.

ಇತರ ಗ್ಯಾಲರಿಗಳು