ನೆಲದ ಸೊಗಡಿನ ಕಥೆ ಹೇಳಲು ಬರ್ತಿದ್ದಾನೆ ಮೂರನೇ ಕೃಷ್ಣಪ್ಪ; ಟ್ರೇಲರ್ನಲ್ಲಿ ಮಜಬೂತಾಗಿದೆ ಹಳ್ಳಿ ರಾಜಕೀಯ
- ಮೂರನೇ ಕೃಷ್ಣಪ್ಪ ಸಿನಿಮಾ ಟ್ರೇಲರ್ ಬಿಡುಗಡೆಯಾಗಿದೆ. ಲೂಸ್ ಮಾದ ಯೋಗಿ ಸಂಭಾಷಣೆಯಲ್ಲಿ ಶುರುವಾಗುವ ಟ್ರೇಲರ್ನಲ್ಲಿ ಕೋಲಾರ ಕನ್ನಡವೇ ಹೈಲೈಟ್. ರಂಗಾಯಣ ರಘು, ಸಂಪತ್ ಮೈತ್ರಿಯಾ ಅವರಂಥ ಅದ್ಭುತ ಕಲಾವಿದರ ಅಭಿನಯ ಒಂದೆಡೆಯಾದರೆ, ಹಳ್ಳಿ ಸೊಗಡಿನ ಹಿನ್ನೆಲೆಯಲ್ಲಿ ತೆರೆದುಕೊಳ್ಳುವ ರಾಜಕೀಯವೂ ಮಜಬೂತಾಗಿದೆ.
- ಮೂರನೇ ಕೃಷ್ಣಪ್ಪ ಸಿನಿಮಾ ಟ್ರೇಲರ್ ಬಿಡುಗಡೆಯಾಗಿದೆ. ಲೂಸ್ ಮಾದ ಯೋಗಿ ಸಂಭಾಷಣೆಯಲ್ಲಿ ಶುರುವಾಗುವ ಟ್ರೇಲರ್ನಲ್ಲಿ ಕೋಲಾರ ಕನ್ನಡವೇ ಹೈಲೈಟ್. ರಂಗಾಯಣ ರಘು, ಸಂಪತ್ ಮೈತ್ರಿಯಾ ಅವರಂಥ ಅದ್ಭುತ ಕಲಾವಿದರ ಅಭಿನಯ ಒಂದೆಡೆಯಾದರೆ, ಹಳ್ಳಿ ಸೊಗಡಿನ ಹಿನ್ನೆಲೆಯಲ್ಲಿ ತೆರೆದುಕೊಳ್ಳುವ ರಾಜಕೀಯವೂ ಮಜಬೂತಾಗಿದೆ.
(1 / 5)
ವಿಭಿನ್ನ ಕಥಾನಕದ ಮೂಲಕವೇ ಪ್ರೇಕ್ಷಕರನ್ನು ಮುಖಾಮುಖಿಯಾಗಲು ಹೊರಟಿರುವ ಸಿನಿಮಾ ಮೂರನೇ ಕೃಷ್ಣಪ್ಪ. ಶುರುವಾದಾಗಿನಿಂದಲೂ ಇಲ್ಲಿವರೆಗೂ ನಾನಾ ಬಗೆಯಲ್ಲಿ ಪ್ರೇಕ್ಷಕರನ್ನು ಸೆಳೆಯುತ್ತಿರುವ ಈ ಚಿತ್ರದ ಟ್ರೇಲರ್ ಮೂಲಕ ಎಲ್ಲರ ಗಮನ ಸೆಳೆಯುತ್ತಿದೆ.
(2 / 5)
'ಮೂರನೇ ಕೃಷ್ಣಪ್ಪ' ಸಿನಿಮಾವನ್ನು ನವೀನ್ ರೆಡ್ಡಿ ನಿರ್ದೇಶನ ಮಾಡಿದ್ದಾರೆ. ವಿಭಿನ್ನ ಶೀರ್ಷಿಕೆಯೊಂದಿಗೆ ಪ್ರೇಕ್ಷಕರನ್ನು ರಂಜಿಸುವುದಕ್ಕೆ ನವೀನ್ ಮುಂದಾಗಿದ್ದಾರೆ. ಸದ್ಯ ರಿಲೀಸ್ ಆಗಿರುವ ಟ್ರೇಲರ್ ಪ್ರಾಮಿಸಿಂಗ್ ಆಗಿದ್ದು, ಸಿನಿಪ್ರಿಯರಿಗೆ ಮನರಂಜನೆ ಗ್ಯಾರೆಂಟಿ ಎಂಬ ಸಂದೇಶ ರವಾನಿಸಿದೆ.
(3 / 5)
ರೆಡ್ ಡ್ರ್ಯಾಗನ್ ಫಿಲಂಸ್ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. 'ಮೂರನೇ ಕೃಷ್ಣಪ್ಪ' ಸಿನಿಮಾಗೆ ಮೋಹನ್ ರೆಡ್ಡಿ ಜಿ, ರವಿಶಂಕರ್ ಹಣ ಹೂಡಿದ್ದಾರೆ.
(4 / 5)
ಗ್ರಾಮೀಣ ಭಾಗದ ಭಾಷೆಯ ಸೊಬಗನ್ನು ಇಟ್ಟುಕೊಂಡು ಈ ಸಿನಿಮಾದ ಕಥೆಯನ್ನು ಹೆಣೆಯಲಾಗಿದೆ. ಸಂಪತ್ ಮೈತ್ರೀಯಾ ನಾಯಕನಾಗಿ ನಟಿಸುತ್ತಿದ್ದರೆ, ಪ್ರಮುಖ ಪಾತ್ರದಲ್ಲಿ ರಂಗಾಯಣ ರಘು ಕಾಣಿಸಿಕೊಂಡಿದ್ದಾರೆ. ಶ್ರೀಪ್ರಿಯಾ ನಾಯಕಿಯಾಗಿದ್ದಾರೆ.
ಇತರ ಗ್ಯಾಲರಿಗಳು