ಕನ್ನಡ ಸುದ್ದಿ  /  Photo Gallery  /  Siddaramaiah New Chief Minister Of Karnataka Dk Shivakumar As Dcm Taking Oath See Photos Rmy

Siddaramaiah CM: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ; ಫೋಟೋಸ್

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹಾಗೂ 8 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ವಿವಿಧ ರಾಜ್ಯಗಳ ನಾಯಕರು, ಸಾವಿರಾರು ಕಾರ್ಯಕರ್ತರು ಸಮಾರಂಭಕ್ಕೆ ಸಾಕ್ಷಿಯಾಗಿದ್ದಾರೆ. ಅದರ ಫೋಟೋಗಳು ಇಲ್ಲಿವೆ.

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಇಂದು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. 2013ರಲ್ಲಿ ಅವರು ಸತ್ಯದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರು. ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ಎನ್‌ಸಿಪಿ ನಾಯಕ ಶರದ್ ಪವಾರ್ ಇದ್ದಾರೆ.
icon

(1 / 10)

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಇಂದು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. 2013ರಲ್ಲಿ ಅವರು ಸತ್ಯದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರು. ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ಎನ್‌ಸಿಪಿ ನಾಯಕ ಶರದ್ ಪವಾರ್ ಇದ್ದಾರೆ.

ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಸಿದ್ದರಾಮಯ್ಯ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
icon

(2 / 10)

ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಸಿದ್ದರಾಮಯ್ಯ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೆರದಿದ್ದವರತ್ತ ಕೈಬೀಸಿ ಶಕ್ತಿ ಪ್ರದರ್ಶನ ತೋರಿಸಿದರು.
icon

(3 / 10)

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೆರದಿದ್ದವರತ್ತ ಕೈಬೀಸಿ ಶಕ್ತಿ ಪ್ರದರ್ಶನ ತೋರಿಸಿದರು.

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಸಿಎಂ ಸಿದ್ದರಾಮಯ್ಯ.
icon

(4 / 10)

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಸಿಎಂ ಸಿದ್ದರಾಮಯ್ಯ.

ಪ್ರಮಾಣವಚನ ಸ್ವೀಕರಿಸಿದ ನೂತನ ಸಿಎಂ ಸಿದ್ದರಾಮಯ್ಯ ಅವರನ್ನು ರಾಜ್ಯಪಾಲರಾದ ಥಾವರ್‌ಚಂದ್‌ ಗೆಹ್ಲೋಟ್ ಹೂಗುಚ್ಛನೀಡಿ ಅಭಿನಂದಿಸಿದರು.
icon

(5 / 10)

ಪ್ರಮಾಣವಚನ ಸ್ವೀಕರಿಸಿದ ನೂತನ ಸಿಎಂ ಸಿದ್ದರಾಮಯ್ಯ ಅವರನ್ನು ರಾಜ್ಯಪಾಲರಾದ ಥಾವರ್‌ಚಂದ್‌ ಗೆಹ್ಲೋಟ್ ಹೂಗುಚ್ಛನೀಡಿ ಅಭಿನಂದಿಸಿದರು.

ಸಿದ್ದರಾಮಯ್ಯ ಹಾಗೂ ಡಿಕ ಶಿವಕುಮಾರ್ ಅವರೊಂದಿಗೆ 8 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
icon

(6 / 10)

ಸಿದ್ದರಾಮಯ್ಯ ಹಾಗೂ ಡಿಕ ಶಿವಕುಮಾರ್ ಅವರೊಂದಿಗೆ 8 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಬಿಹಾರ ಸಿಎಂ ನಿತೀಶ್ ಕುಮಾರ್, ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್, ಸಿಪಿಐ, ಸಿಪಿಎಂ, ಆರ್‌ಜೆಡಿ ಸೇರಿದಂತೆ ವಿವಿಧ ಪಕ್ಷದ ನಾಯಕರು ಸಮಾರಂಭದಲ್ಲಿ ಭಾಗವಹಿಸಿದ್ದರು.
icon

(7 / 10)

ಬಿಹಾರ ಸಿಎಂ ನಿತೀಶ್ ಕುಮಾರ್, ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್, ಸಿಪಿಐ, ಸಿಪಿಎಂ, ಆರ್‌ಜೆಡಿ ಸೇರಿದಂತೆ ವಿವಿಧ ಪಕ್ಷದ ನಾಯಕರು ಸಮಾರಂಭದಲ್ಲಿ ಭಾಗವಹಿಸಿದ್ದರು.

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಅವರ ಪ್ರಮಾಣವಚನ ಕಾರ್ಯಕ್ರಮಕ್ಕೆ ಸಾವಿರಾರದ ಮಂದಿ ಬೆಂಬಲಿಗರು, ಕಾರ್ಯಕರ್ತರು ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದರು.
icon

(8 / 10)

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಅವರ ಪ್ರಮಾಣವಚನ ಕಾರ್ಯಕ್ರಮಕ್ಕೆ ಸಾವಿರಾರದ ಮಂದಿ ಬೆಂಬಲಿಗರು, ಕಾರ್ಯಕರ್ತರು ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದರು.

ಕಾಂಗ್ರೆಸ್‌ನ ಸಾವಿರಾರು ಮಂದಿ ಕಾರ್ಯಕರ್ತರು ಕಂಠೀರವ ಕ್ರೀಡಾಂಗಣಕ್ಕೆ ಆಗಮಿಸಿದ ಸಿದ್ದರಾಮಯ್ಯ, ಡಿಕೆಶಿ ಕುಮಾರ್ ಪದಗ್ರಹಣವನ್ನು ಕಣ್ತುಂಬಿಕೊಂಡರು. ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು.
icon

(9 / 10)

ಕಾಂಗ್ರೆಸ್‌ನ ಸಾವಿರಾರು ಮಂದಿ ಕಾರ್ಯಕರ್ತರು ಕಂಠೀರವ ಕ್ರೀಡಾಂಗಣಕ್ಕೆ ಆಗಮಿಸಿದ ಸಿದ್ದರಾಮಯ್ಯ, ಡಿಕೆಶಿ ಕುಮಾರ್ ಪದಗ್ರಹಣವನ್ನು ಕಣ್ತುಂಬಿಕೊಂಡರು. ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು.

ಸಿದ್ದರಾಯಮ್ಯ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ಇತ್ತ ವಿಧಾನಸೌಧದ ಕೊಠಡಿ ಸಂಖ್ಯೆ 323ರಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಎಂಬ ನಾಮಫಲಕವನ್ನು ಹಾಕಲಾಯಿತು.
icon

(10 / 10)

ಸಿದ್ದರಾಯಮ್ಯ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ಇತ್ತ ವಿಧಾನಸೌಧದ ಕೊಠಡಿ ಸಂಖ್ಯೆ 323ರಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಎಂಬ ನಾಮಫಲಕವನ್ನು ಹಾಕಲಾಯಿತು.


IPL_Entry_Point

ಇತರ ಗ್ಯಾಲರಿಗಳು