ಸಿನಿಮಾ ಶೂಟಿಂಗ್‌ಗೆ ಬಿಡುವು, ಗುವಾಹಟಿಯ ಕಾಮಾಕ್ಯ ದೇವಿಯ ದರ್ಶನ ಪಡೆದ ನಟಿ ಐಶ್ವರ್ಯಾ ರಾಜೇಶ್‌
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಸಿನಿಮಾ ಶೂಟಿಂಗ್‌ಗೆ ಬಿಡುವು, ಗುವಾಹಟಿಯ ಕಾಮಾಕ್ಯ ದೇವಿಯ ದರ್ಶನ ಪಡೆದ ನಟಿ ಐಶ್ವರ್ಯಾ ರಾಜೇಶ್‌

ಸಿನಿಮಾ ಶೂಟಿಂಗ್‌ಗೆ ಬಿಡುವು, ಗುವಾಹಟಿಯ ಕಾಮಾಕ್ಯ ದೇವಿಯ ದರ್ಶನ ಪಡೆದ ನಟಿ ಐಶ್ವರ್ಯಾ ರಾಜೇಶ್‌

ಬಹುಭಾಷಾ ನಟಿ ಐಶ್ವರ್ಯ ರಾಜೇಶ್ ಅವರು ಅಸ್ಸಾಂನ ಗುವಾಹಟಿ ಬಳಿಯ ಕಾಮಾಕ್ಯ ದೇವಾಲಯಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ ಮತ್ತು ಆ ಫೋಟೋಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ.

ಈ ವರ್ಷ ಬಿಡುಗಡೆಯಾದ ‘ಸಂಕ್ರಾಂತಿಕಿ ವಸ್ತುನ್ನಾಂʼ ಚಿತ್ರದ ಮೂಲಕ ದೊಡ್ಡ ಯಶಸ್ಸು ಕಂಡ ನಟಿ ಐಶ್ವರ್ಯ ರಾಜೇಶ್, ಇತ್ತೀಚೆಗೆ ಕಾಮಾಕ್ಯ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.
icon

(1 / 5)

ಈ ವರ್ಷ ಬಿಡುಗಡೆಯಾದ ‘ಸಂಕ್ರಾಂತಿಕಿ ವಸ್ತುನ್ನಾಂʼ ಚಿತ್ರದ ಮೂಲಕ ದೊಡ್ಡ ಯಶಸ್ಸು ಕಂಡ ನಟಿ ಐಶ್ವರ್ಯ ರಾಜೇಶ್, ಇತ್ತೀಚೆಗೆ ಕಾಮಾಕ್ಯ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.

ಅಸ್ಸಾಂನ ಗುವಾಹಟಿಯಲ್ಲಿರುವ ಈ ಶಕ್ತಿಪೀಠಕ್ಕೆ ಐಶ್ವರ್ಯ ರಾಜೇಶ್‌ ಭೇಟಿ ನೀಡಿ ಕಾಮಾಕ್ಯ ದೇವಿಯ ದರ್ಶನ ಪಡೆದಿದ್ದಾರೆ ಮತ್ತು ದೀಪಾರಾಧನೆ ಮಾಡಿದ್ದಾರೆ.
icon

(2 / 5)

ಅಸ್ಸಾಂನ ಗುವಾಹಟಿಯಲ್ಲಿರುವ ಈ ಶಕ್ತಿಪೀಠಕ್ಕೆ ಐಶ್ವರ್ಯ ರಾಜೇಶ್‌ ಭೇಟಿ ನೀಡಿ ಕಾಮಾಕ್ಯ ದೇವಿಯ ದರ್ಶನ ಪಡೆದಿದ್ದಾರೆ ಮತ್ತು ದೀಪಾರಾಧನೆ ಮಾಡಿದ್ದಾರೆ.

ತಮ್ಮ ಸ್ನೇಹಿತೆಯರೊಂದಿಗೆ ದೇವಾಲಯಕ್ಕೆ ತೆರಳಿದ ಐಶ್ವರ್ಯಾ, ಭಕ್ತಿಯಿಂದ ಅಮ್ಮನಿಗೆ ಪೂಜೆ ಸಲ್ಲಿಸಿದ್ದಾರೆ. ಈ ಭೇಟಿಯ ಫೋಟೋಗಳನ್ನು ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡು ‘ಜೈ ಕಾಮಾಕ್ಯ ಮಾ’ ಎಂದು ಕ್ಯಾಪ್ಷನ್ ನೀಡಿದ್ದಾರೆ.
icon

(3 / 5)

ತಮ್ಮ ಸ್ನೇಹಿತೆಯರೊಂದಿಗೆ ದೇವಾಲಯಕ್ಕೆ ತೆರಳಿದ ಐಶ್ವರ್ಯಾ, ಭಕ್ತಿಯಿಂದ ಅಮ್ಮನಿಗೆ ಪೂಜೆ ಸಲ್ಲಿಸಿದ್ದಾರೆ. ಈ ಭೇಟಿಯ ಫೋಟೋಗಳನ್ನು ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡು ‘ಜೈ ಕಾಮಾಕ್ಯ ಮಾ’ ಎಂದು ಕ್ಯಾಪ್ಷನ್ ನೀಡಿದ್ದಾರೆ.

‘ಸಂಕ್ರಾಂತಿಕಿ ವಸ್ತುನ್ನಾಂ’ ಚಿತ್ರದಲ್ಲಿ ವಿಕ್ಟರಿ ವೆಂಕಟೇಶ್ ಅವರ ಜೊತೆ ಐಶ್ವರ್ಯ ನಟಿಸಿದ್ದರು, ಅನಿಲ್ ರವಿಪೂಡಿ ನಿರ್ದೇಶನದ ಈ ಚಿತ್ರ ಜನವರಿಯಲ್ಲಿ ಬಿಡುಗಡೆಯಾಗಿ ದೊಡ್ಡ ಯಶಸ್ಸು ಕಂಡಿತ್ತು.
icon

(4 / 5)

‘ಸಂಕ್ರಾಂತಿಕಿ ವಸ್ತುನ್ನಾಂ’ ಚಿತ್ರದಲ್ಲಿ ವಿಕ್ಟರಿ ವೆಂಕಟೇಶ್ ಅವರ ಜೊತೆ ಐಶ್ವರ್ಯ ನಟಿಸಿದ್ದರು, ಅನಿಲ್ ರವಿಪೂಡಿ ನಿರ್ದೇಶನದ ಈ ಚಿತ್ರ ಜನವರಿಯಲ್ಲಿ ಬಿಡುಗಡೆಯಾಗಿ ದೊಡ್ಡ ಯಶಸ್ಸು ಕಂಡಿತ್ತು.

ಐಶ್ವರ್ಯಾ ರಾಜೇಶ್ ಅವರು ಪ್ರಸ್ತುತ ತಮಿಳಿನಲ್ಲಿ ‘ಕರುಪ್ಪರ್ ನಗರಮ್’, ‘ಮೋಹನ್‌ದಾಸ್’ ಹಾಗೂ ಮತ್ತೊಂದು ಚಿತ್ರದಲ್ಲಿ ನಟಿಸುತ್ತಿದ್ದಾರೆ.
icon

(5 / 5)

ಐಶ್ವರ್ಯಾ ರಾಜೇಶ್ ಅವರು ಪ್ರಸ್ತುತ ತಮಿಳಿನಲ್ಲಿ ‘ಕರುಪ್ಪರ್ ನಗರಮ್’, ‘ಮೋಹನ್‌ದಾಸ್’ ಹಾಗೂ ಮತ್ತೊಂದು ಚಿತ್ರದಲ್ಲಿ ನಟಿಸುತ್ತಿದ್ದಾರೆ.

Manjunath B Kotagunasi

TwittereMail
ಮಂಜುನಾಥ ಕೊಟಗುಣಸಿ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಚೀಫ್‌ ಕಂಟೆಂಟ್‌ ಪ್ರೊಡ್ಯೂಸರ್‌, ಮನರಂಜನೆ ವಿಭಾಗದಲ್ಲಿ ಕಾರ್ಯನಿರ್ವಹಣೆ. ಈ ಮೊದಲು ವಿಜಯವಾಣಿ, ವಿಶ್ವವಾಣಿ ಪತ್ರಿಕೆಗಳು ಮತ್ತು ಟಿವಿ9 ಸುದ್ದಿವಾಹಿನಿಯ ವಿವಿಧ ವಿಭಾಗಗಳಲ್ಲಿ ಒಟ್ಟು 12 ವರ್ಷ ಕೆಲಸ ಮಾಡಿದ ಅನುಭವ. ಸಿನಿಮಾ ಮೋಹಿ, ಕ್ರಿಕೆಟ್‌ ಪ್ರಿಯ. ಧಾರವಾಡ ಜಿಲ್ಲೆಯ ಕಲಘಟಗಿ ನಿವಾಸಿ.

ಇತರ ಗ್ಯಾಲರಿಗಳು