ಪೊಳಲಿ ಶ್ರೀರಾಜರಾಜೇಶ್ವರಿ ದೇವರ ಜಾತ್ರೆಯಲ್ಲಿ ಕಲ್ಲಂಗಡಿಯನ್ನೇ ಪ್ರಸಾದವಾಗಿ ಕೊಡುವುದು ಏಕೆ; ಫೋಟೊ ಸಹಿತ ಮಾಹಿತಿ ತಿಳಿಯಿರಿ
- ಅತ್ಯಂತ ಪುರಾತನ ದೇವಸ್ಥಾನ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾದಲ್ಲಿ ನಡೆಯುವ ವಾರ್ಷಿಕ ಜಾತ್ರೋತ್ಸವದಲ್ಲಿ ಪ್ರಸಾದಕ್ಕೆ ಕಲ್ಲಂಗಡಿಯನ್ನು ಬಳಸಲಾಗುತ್ತದೆ. ಆಸಕ್ತಿಕರ ಮಾಹಿತಿ ಫೋಟೊ ಸಹಿತ ಇಲ್ಲಿದೆ.
- ಅತ್ಯಂತ ಪುರಾತನ ದೇವಸ್ಥಾನ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾದಲ್ಲಿ ನಡೆಯುವ ವಾರ್ಷಿಕ ಜಾತ್ರೋತ್ಸವದಲ್ಲಿ ಪ್ರಸಾದಕ್ಕೆ ಕಲ್ಲಂಗಡಿಯನ್ನು ಬಳಸಲಾಗುತ್ತದೆ. ಆಸಕ್ತಿಕರ ಮಾಹಿತಿ ಫೋಟೊ ಸಹಿತ ಇಲ್ಲಿದೆ.
(1 / 6)
ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾದಲ್ಲಿ ನಡೆಯುವ ವಾರ್ಷಿಕ ಜಾತ್ರೋತ್ಸವಕ್ಕೆ ಕಲ್ಲಂಗಡಿ ಹಣ್ಣೇ ಪ್ರಸಾದವೆಂಬ ನಂಬಿಕೆ ಇದೆ. ಮಾರ್ಚ್ ನಿಂದ ಎಪ್ರಿಲ್ ವರೆಗೆ ನಡೆಯುವ ಒಂದು ತಿಂಗಳ ಜಾತ್ರೆಯ ವೇಳೆ ಸಂತೆಯಲ್ಲಿ ಕಲ್ಲಂಗಡಿ ಹಣ್ಣಿನದ್ದೇ ಭರ್ಜರಿ ವ್ಯಾಪಾರ. ದೇವಸ್ಥಾನಕ್ಕೆ ಬರುವ ಭಕ್ತರು ಇಲ್ಲಿ ಕಲ್ಲಂಗಡಿ ಹಣ್ಣನ್ನು ಎಷ್ಟು ಹಣಕೊಟ್ಟಾದರೂ ಖರೀದಿಸುತ್ತಾರೆ.
(2 / 6)
ಇಲ್ಲಿನ ಕಲ್ಲಂಗಡಿ ಹಣ್ಣನ್ನು ಪುರಾಣದ ರಕ್ತಬೀಜಾಸುರನೆಂದೇ ನಂಬಲಾಗುತ್ತದೆ. ಅದರೊಳಗಿನ ಕೆಂಪು ತಿರುಳು ರಾಕ್ಷಸನ ರಕ್ತವನ್ನು ಸಂಕೇತಿಸಿದರೆ, ಅದರೊಳಗಿನ ಬೀಜಗಳು ಬೀಜಾಸುರಾದಿಗಳನ್ನು ಸಂಕೇತಿಸುತ್ತದೆ. ಪೊಳಲಿ ವ್ಯಾಪ್ತಿಯ 10 ಗ್ರಾಮಗಳಲ್ಲಿ ಈ ಹಣ್ಣನ್ನು ಬೆಳೆಯಲಾಗುತ್ತಿದ್ದು, ಇದು ಇತ್ತೀಚೆಗೆ ಕಡಿಮೆಯಾಗಿದೆ.
(3 / 6)
ಪೊಳಲಿ, ಮಳಲಿ, ಕರಿಯಂಗಳ ಸೇರಿದಂತೆ ಸುತ್ತಮುತ್ತಲಿನ ಭಾಗಗಳಲ್ಲಿ ಬೆಳೆಸಲಾಗುವ ಕಲ್ಲಂಗಡಿ ಹಣ್ಣುಗಳನ್ನು ಮಾತ್ರ ಇಲ್ಲಿ ಮಾರಾಟ ಮಾಡಲಾಗುತ್ತದೆ. ಸ್ಥಳೀಯ ಕೃಷಿಕರೇ ಈ ಹಣ್ಣು ಬೆಳೆದು ಮಾರಾಟ ಮಾಡುತ್ತಾರೆ. ಇವರು ವೃತ್ತಿಪರ ಕೃಷಿಕರಲ್ಲ, ಇದು ಅವರ ಹವ್ಯಾಸವಷ್ಟೇ.
(4 / 6)
ಹೊರಗಿನ ಕೃಷಿಕರು ಇಲ್ಲಿ ಕಲ್ಲಂಗಡಿ ಹಣ್ಣಿನ ವ್ಯಾಪಾರಕ್ಕೆ ಬಂದರೆ ಆ ಕಲ್ಲಂಗಡಿ ಮಾರಾಟವಾಗುವುದೂ ಇಲ್ಲ. ಏಕೆಂದರೆ ಸ್ಥಳೀಯ ತಳಿಯ ಆಕಾರ, ಬಣ್ಣಕ್ಕಿಂತ ಇತರ ತಳಿಯ ಕಲ್ಲಂಗಡಿ ಭಿನ್ನವಾಗಿರುತ್ತದೆ. ಇತರೆಡೆಯ ಕಲ್ಲಂಗಡಿ ಮೊಟ್ಟೆಯಾಕಾರವನ್ನು ಹೋಲುತ್ತಿದ್ದರೆ, ಪೊಳಲಿಯಲ್ಲಿ ಮಾರುವ ಕಲ್ಲಂಗಡಿ ಮಾನವನ ತಲೆಯ ಆಕಾರವನ್ನು ಹೋಲುತ್ತದೆ.
(5 / 6)
ಪೊಳಲಿಯ ಜೀವನದಿ ಫಲ್ಗುಣಿ ನದಿಯ ಸುತ್ತಮುತ್ತಲಿನ ಮರಳು ಮಣ್ಣು ಕಲ್ಲಂಗಡಿ ಬೆಳೆಯಲು ಉತ್ತಮ ಪ್ರದೇಶವಾಗಿದೆ. ಇಲ್ಲಿನ ಕಲ್ಲಂಗಡಿ ರಾಸಾಯನಿಕಗಳ ಬಳಕೆಯಿಲ್ಲದೆ ಬೆಳೆಯಲಾಗುತ್ತದೆ.
ಇತರ ಗ್ಯಾಲರಿಗಳು