ಕೊಟ್ಟೂರು ತಾಲ್ಲೂಕು ಉಜ್ಜಯಿನಿ ಶ್ರೀ ಮರುಳ ಸಿದ್ದೇಶ್ವರ ಜಾತ್ರಾ ಮಹೋತ್ಸವ ಸಂಭ್ರಮ, ರಥ ಎಳೆದ ಸಹಸ್ರಾರು ಭಕ್ತರು
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಕೊಟ್ಟೂರು ತಾಲ್ಲೂಕು ಉಜ್ಜಯಿನಿ ಶ್ರೀ ಮರುಳ ಸಿದ್ದೇಶ್ವರ ಜಾತ್ರಾ ಮಹೋತ್ಸವ ಸಂಭ್ರಮ, ರಥ ಎಳೆದ ಸಹಸ್ರಾರು ಭಕ್ತರು

ಕೊಟ್ಟೂರು ತಾಲ್ಲೂಕು ಉಜ್ಜಯಿನಿ ಶ್ರೀ ಮರುಳ ಸಿದ್ದೇಶ್ವರ ಜಾತ್ರಾ ಮಹೋತ್ಸವ ಸಂಭ್ರಮ, ರಥ ಎಳೆದ ಸಹಸ್ರಾರು ಭಕ್ತರು

ವಿಜಯನಗರ ಜಿಲ್ಲೆ ಕೊಟ್ಟೂರು ತಾಲ್ಲೂಕಿನ ಐತಿಹಾಸಿಕ ತಾಣವಾದ ಉಜ್ಜಯಿನಿಯಲ್ಲಿ ಶ್ರೀ ಮರುಳ ಸಿದ್ದೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ರಥೋತ್ಸವ ಸಡಗರ, ಸಂಭ್ರಮದಿಂದ ನೆರವೇರಿತು.

ಕೊಟ್ಟೂರು ತಾಲ್ಲೂಕಿನ ಉಜ್ಜಯಿನಿ ಗ್ರಾಮದ ಐತಿಹಾಸಿಕ ಮರುಳ ಸಿದ್ದೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ರಥೋತ್ಸವ ಪ್ರಮುಖ ಬೀದಿಗಳಲ್ಲಿ ನೆರವೇರಿತು,
icon

(1 / 6)

ಕೊಟ್ಟೂರು ತಾಲ್ಲೂಕಿನ ಉಜ್ಜಯಿನಿ ಗ್ರಾಮದ ಐತಿಹಾಸಿಕ ಮರುಳ ಸಿದ್ದೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ರಥೋತ್ಸವ ಪ್ರಮುಖ ಬೀದಿಗಳಲ್ಲಿ ನೆರವೇರಿತು,

ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಸಹಿತ ನಾನಾ ಭಾಗಗಳಿಂದ ಆಗಮಿಸಿದ್ದ ಸಹಸ್ರಾರು ಭಕ್ತರು ಮರುಳ ಸಿದ್ದೇಶ್ವರರ ರಥೋತ್ಸವದಲ್ಲಿ ಭಾಗಿಯಾದರು.ಸಾಮರಸ್ಯ, ಹಾಗೂ ಸಹೋದರತ್ವ ಬೆಸೆಯುವ ಇಂತಹ ರಥೋತ್ಸವಗಳು ನಮ್ಮ ಸಂಸ್ಕೃತಿಯ ನಿಜವಾದ ವೈಭವ. ಈ ಪವಿತ್ರ ರಥೋತ್ಸವದಲ್ಲಿ ಭಕ್ತರು ಶ್ರದ್ಧಾ ಭಕ್ತಿಯಿಂದ ಭಾಗವಹಿಸಿ ಧನ್ಯರಾದರು
icon

(2 / 6)

ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಸಹಿತ ನಾನಾ ಭಾಗಗಳಿಂದ ಆಗಮಿಸಿದ್ದ ಸಹಸ್ರಾರು ಭಕ್ತರು ಮರುಳ ಸಿದ್ದೇಶ್ವರರ ರಥೋತ್ಸವದಲ್ಲಿ ಭಾಗಿಯಾದರು.ಸಾಮರಸ್ಯ, ಹಾಗೂ ಸಹೋದರತ್ವ ಬೆಸೆಯುವ ಇಂತಹ ರಥೋತ್ಸವಗಳು ನಮ್ಮ ಸಂಸ್ಕೃತಿಯ ನಿಜವಾದ ವೈಭವ. ಈ ಪವಿತ್ರ ರಥೋತ್ಸವದಲ್ಲಿ ಭಕ್ತರು ಶ್ರದ್ಧಾ ಭಕ್ತಿಯಿಂದ ಭಾಗವಹಿಸಿ ಧನ್ಯರಾದರು

ಬೃಹತ್‌ ಹಾಗೂ ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲರು ಕೂಡ ಉಜ್ಜಯಿನಿ ಶ್ರೀ ಮರುಳ ಸಿದ್ದೇಶ್ವರ ರಥೋತ್ಸವದಲ್ಲಿ ಭಾಗಿಯಾದರು.
icon

(3 / 6)

ಬೃಹತ್‌ ಹಾಗೂ ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲರು ಕೂಡ ಉಜ್ಜಯಿನಿ ಶ್ರೀ ಮರುಳ ಸಿದ್ದೇಶ್ವರ ರಥೋತ್ಸವದಲ್ಲಿ ಭಾಗಿಯಾದರು.

ಉಜ್ಜಯನಿ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ರಥ ಆಗಮಿಸಿದಾಗ ಭಕ್ತರು ಸೆಲ್ಫಿ ತೆಗೆದುಕೊಂಡು ಖುಷಿ ಪಟ್ಟರು.
icon

(4 / 6)

ಉಜ್ಜಯನಿ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ರಥ ಆಗಮಿಸಿದಾಗ ಭಕ್ತರು ಸೆಲ್ಫಿ ತೆಗೆದುಕೊಂಡು ಖುಷಿ ಪಟ್ಟರು.

ಉಜ್ಜಯಿನಿ ಪೀಠದ  ಶ್ರೀ ಸಿದ್ಧಲಿಂಗ ರಾಜ ದೇಶಿಕೇಂದ್ರ ಶಿವಾಚಾರ್ಯ ಸ್ವಾಮಿಗಳವರ ದಿವ್ಯ ಸಾನಿಧ್ಯದಲ್ಲಿ  ಕೊಟ್ಟೂರು ತಾಲ್ಲೂಕಿನ ಉಜ್ಜಿನಿ ಗ್ರಾಮದ ಐತಿಹಾಸಿಕ ಮರುಳ ಸಿದ್ದೇಶ್ವರ ಜಾತ್ರಾ ಮಹೋತ್ಸವದಲ್ಲಿ ವಿವಿಧ ಮಠಾಧೀಶರು, ಗಣ್ಯರು ಭಾಗಿಯಾದರು.
icon

(5 / 6)

ಉಜ್ಜಯಿನಿ ಪೀಠದ ಶ್ರೀ ಸಿದ್ಧಲಿಂಗ ರಾಜ ದೇಶಿಕೇಂದ್ರ ಶಿವಾಚಾರ್ಯ ಸ್ವಾಮಿಗಳವರ ದಿವ್ಯ ಸಾನಿಧ್ಯದಲ್ಲಿ ಕೊಟ್ಟೂರು ತಾಲ್ಲೂಕಿನ ಉಜ್ಜಿನಿ ಗ್ರಾಮದ ಐತಿಹಾಸಿಕ ಮರುಳ ಸಿದ್ದೇಶ್ವರ ಜಾತ್ರಾ ಮಹೋತ್ಸವದಲ್ಲಿ ವಿವಿಧ ಮಠಾಧೀಶರು, ಗಣ್ಯರು ಭಾಗಿಯಾದರು.

ಉಜ್ಜಯಿನಿ ಗ್ರಾಮದ ಶ್ರೀ ಮರುಳ ಸಿದ್ದೇಶ್ವರರಿಗೆ ಭಕ್ತರು ವಿಶೇಷ ಪೂಜೆಯನ್ನು ಸಲ್ಲಿಸಿದರು. ರಥೋತ್ಸವ ಅಂಗವಾಗಿ ವಿಶೇಷ ಅಲಂಕಾರವನ್ನೂ ಮಾಡಲಾಗಿತ್ತು.
icon

(6 / 6)

ಉಜ್ಜಯಿನಿ ಗ್ರಾಮದ ಶ್ರೀ ಮರುಳ ಸಿದ್ದೇಶ್ವರರಿಗೆ ಭಕ್ತರು ವಿಶೇಷ ಪೂಜೆಯನ್ನು ಸಲ್ಲಿಸಿದರು. ರಥೋತ್ಸವ ಅಂಗವಾಗಿ ವಿಶೇಷ ಅಲಂಕಾರವನ್ನೂ ಮಾಡಲಾಗಿತ್ತು.

Umesha Bhatta P H

TwittereMail
ಕುಂದೂರು ಉಮೇಶಭಟ್ಟ ಪಿ.ಎಚ್.: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಡೆಪ್ಯುಟಿ ಚೀಫ್ ಕಂಟೆಂಟ್ ಪ್ರೊಡ್ಯೂಸರ್. ವಿಜಯ ಕರ್ನಾಟಕದಲ್ಲಿ ವಿಜಯಪುರ ಬ್ಯೂರೊ ಚೀಫ್ ಸೇರಿ ಹಲವು ಮಹತ್ವದ ಹುದ್ದೆಗಳ ನಿರ್ವಹಣೆ. ಮಲೆನಾಡು ಮಿತ್ರ, ಆಂದೋಲನ ಸೇರಿ ವಿವಿಧ ಪತ್ರಿಕೆಗಳಲ್ಲಿ 25 ವರ್ಷಗಳ ಅನುಭವ. ಪರಿಸರ, ಅರಣ್ಯ, ವನ್ಯಜೀವಿ, ಅಭಿವೃದ್ದಿ, ರಾಜಕೀಯ ಆಸಕ್ತಿ ಕ್ಷೇತ್ರಗಳು. 'ಕಾಡಿನ ಕಥೆಗಳು' ಅಂಕಣ ಬರೆಯುತ್ತಿದ್ದಾರೆ. ದಾವಣಗೆರೆ ಜಿಲ್ಲೆಯ ಕುಂದೂರು ಸ್ವಂತ ಊರು. ಸದ್ಯಕ್ಕೆ ಮೈಸೂರು ನಿವಾಸಿ.

ಇತರ ಗ್ಯಾಲರಿಗಳು