Vijayapura News: ಗೋಲಗೇರಿ ಗೋಲ್ಲಾಳೇಶ್ವರ ರಥೋತ್ಸವ ಸಂಭ್ರಮ; ಮುಗಿಲುಮುಟ್ಟಿದ ಹರ್ಷೋದ್ಗಾರ, ಭಕ್ತರಿಂದ ದೀಡ ನಮಸ್ಕಾರ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Vijayapura News: ಗೋಲಗೇರಿ ಗೋಲ್ಲಾಳೇಶ್ವರ ರಥೋತ್ಸವ ಸಂಭ್ರಮ; ಮುಗಿಲುಮುಟ್ಟಿದ ಹರ್ಷೋದ್ಗಾರ, ಭಕ್ತರಿಂದ ದೀಡ ನಮಸ್ಕಾರ

Vijayapura News: ಗೋಲಗೇರಿ ಗೋಲ್ಲಾಳೇಶ್ವರ ರಥೋತ್ಸವ ಸಂಭ್ರಮ; ಮುಗಿಲುಮುಟ್ಟಿದ ಹರ್ಷೋದ್ಗಾರ, ಭಕ್ತರಿಂದ ದೀಡ ನಮಸ್ಕಾರ

  • Vijayapura News: ಉತ್ತರ ಕರ್ನಾಟಕದಲ್ಲೇ ಅತಿ ಎತ್ತರದ ರಥ ಎಂದೇ ಹೆಸರುವಾಸಿಯಾದ ವಿಜಯಪುರ ಜಿಲ್ಲೆ ಗೋಲಗೇರಿ ಗೊಲ್ಲಾಳೇಶ್ವರ ರಥೋತ್ಸವ ಸಡಗರ, ಸಂಘ್ರಮದಿಂದ ಜರುಗಿತು.
  • ಚಿತ್ರ ಮಾಹಿತಿ : ಮಲ್ಲಿಕಾಜು೯ನ ಕೆಂಭಾವಿ ವರದಿಗಾರರು,ಸಿಂದಗಿ

ಮುಗಿಲು ಮುಟ್ಟಿದ ಹರ್ಷೋದ್ಗಾರ, ಎಲ್ಲಿ ನೋಡಿದರೂ ಜನಸಾಗರ, ಹಣ್ಣು ಸಮಪಿ೯ಸಿ ಭಕ್ತಿ ಮೆರೆದ ಭಕ್ತರ ನಡುವೆ ವಿಜಯಪುರ ಜಿಲ್ಲೆಯ ಗೊಲ್ಲಾಳೇಶ್ವರ ರಥೋತ್ಸವ ಜರುಗಿತು,
icon

(1 / 8)

ಮುಗಿಲು ಮುಟ್ಟಿದ ಹರ್ಷೋದ್ಗಾರ, ಎಲ್ಲಿ ನೋಡಿದರೂ ಜನಸಾಗರ, ಹಣ್ಣು ಸಮಪಿ೯ಸಿ ಭಕ್ತಿ ಮೆರೆದ ಭಕ್ತರ ನಡುವೆ ವಿಜಯಪುರ ಜಿಲ್ಲೆಯ ಗೊಲ್ಲಾಳೇಶ್ವರ ರಥೋತ್ಸವ ಜರುಗಿತು,

ಸಿಂದಗಿ ತಾಲೂಕಿನ ಸುಕ್ಷೇತ್ರ ಗೋಲಗೇರಿಯ ಗೊಲ್ಲಾಳೇಶ್ವರ ರಥೋತ್ಸವ ಶನಿವಾರ ಸಂಜೆ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಮುಕ್ತಾಯಗೊಂಡಿತು.
icon

(2 / 8)

ಸಿಂದಗಿ ತಾಲೂಕಿನ ಸುಕ್ಷೇತ್ರ ಗೋಲಗೇರಿಯ ಗೊಲ್ಲಾಳೇಶ್ವರ ರಥೋತ್ಸವ ಶನಿವಾರ ಸಂಜೆ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಮುಕ್ತಾಯಗೊಂಡಿತು.

ಸುತ್ತಲಿನ 20ಕ್ಕೂ ಹೆಚ್ಚು ಹಳ್ಳಿಗಳ ಭಕ್ತರು ಪಾದಯಾತ್ರೆ ಮೂಲಕ ನಸುಕಿನಲ್ಲೇ ಕ್ಷೇತ್ರಕ್ಕೆ ಆಗಮಿಸಿದರು. ಸೂರ್ಯೋದಯ ಸಂದರ್ಭದಲ್ಲಿ ಸಾವಿರಾರು ಭಕ್ತರು ದೀಡ ನಮಸ್ಕಾರ ಹಾಕುವ ಮೂಲಕ ಹರಕೆ ತೀರಿಸಿದರೆ, ರಥ ಎಳೆಯುವಾಗ ಮನೆ ಮೇಲೇರಿ ಭಕ್ತರು ಗೊಲ್ಲಾಳೇಶ್ವರನಿಗೆ ಕೈ ಮುಗಿದರು,.
icon

(3 / 8)

ಸುತ್ತಲಿನ 20ಕ್ಕೂ ಹೆಚ್ಚು ಹಳ್ಳಿಗಳ ಭಕ್ತರು ಪಾದಯಾತ್ರೆ ಮೂಲಕ ನಸುಕಿನಲ್ಲೇ ಕ್ಷೇತ್ರಕ್ಕೆ ಆಗಮಿಸಿದರು. ಸೂರ್ಯೋದಯ ಸಂದರ್ಭದಲ್ಲಿ ಸಾವಿರಾರು ಭಕ್ತರು ದೀಡ ನಮಸ್ಕಾರ ಹಾಕುವ ಮೂಲಕ ಹರಕೆ ತೀರಿಸಿದರೆ, ರಥ ಎಳೆಯುವಾಗ ಮನೆ ಮೇಲೇರಿ ಭಕ್ತರು ಗೊಲ್ಲಾಳೇಶ್ವರನಿಗೆ ಕೈ ಮುಗಿದರು,.

ದೇವಸ್ಥಾನದಿಂದ ಪಾದಗಟ್ಟೆವರೆಗೆ ರಥ ಸಾಗುತ್ತಿದ್ದಂತೆ ಭಕ್ತರ ಜಯಘೋಷ ಮುಗಿಲು ಮುಟ್ಟಿತು. ಭಕ್ತರು ಉತ್ತತ್ತಿ, ಹಣ್ಣು, ಕಾಯಿ ಕರ್ಪೂರ ಸಮರ್ಪಿಸಿದರು. ಆಂಧ್ರ,  ಮಹಾರಾಷ್ಟ್ರ ಸೇರಿದಂತೆ ರಾಜ್ಯದ  ವಿಜಯಪುರ, ಯಾದಗಿರಿ, ಕಲಬುರಗಿ ಜಿಲ್ಲೆಯಿಂದ ಉತ್ಸವಕ್ಕೆ ಭಕ್ತಸಾಗರವೇ ಹರಿದುಬಂದಿತ್ತು.
icon

(4 / 8)

ದೇವಸ್ಥಾನದಿಂದ ಪಾದಗಟ್ಟೆವರೆಗೆ ರಥ ಸಾಗುತ್ತಿದ್ದಂತೆ ಭಕ್ತರ ಜಯಘೋಷ ಮುಗಿಲು ಮುಟ್ಟಿತು. ಭಕ್ತರು ಉತ್ತತ್ತಿ, ಹಣ್ಣು, ಕಾಯಿ ಕರ್ಪೂರ ಸಮರ್ಪಿಸಿದರು. ಆಂಧ್ರ, ಮಹಾರಾಷ್ಟ್ರ ಸೇರಿದಂತೆ ರಾಜ್ಯದ ವಿಜಯಪುರ, ಯಾದಗಿರಿ, ಕಲಬುರಗಿ ಜಿಲ್ಲೆಯಿಂದ ಉತ್ಸವಕ್ಕೆ ಭಕ್ತಸಾಗರವೇ ಹರಿದುಬಂದಿತ್ತು.

ಧರ್ಮದರ್ಶಿ ವರಪುತ್ರ ಹೊಳೆಪ್ಪ ಶರಣರು ದೇವರಮನಿ ಹಾಗೂ ಸಿದ್ದರಾಮ ದೇವರಮನಿ ಅವರ ನೇತೃತ್ವದಲ್ಲಿಗೊಲ್ಲಾಳೇಶ್ವರನಿಗೆ ಬೆಳಗ್ಗೆ ರುದ್ರಾಭಿಷೇಕ ಹಾಗೂ ವಿಶೇಷ ಅಲಂಕಾರ ಪೂಜೆ ನೆರವೇರಿಸಲಾಯಿತು
icon

(5 / 8)

ಧರ್ಮದರ್ಶಿ ವರಪುತ್ರ ಹೊಳೆಪ್ಪ ಶರಣರು ದೇವರಮನಿ ಹಾಗೂ ಸಿದ್ದರಾಮ ದೇವರಮನಿ ಅವರ ನೇತೃತ್ವದಲ್ಲಿಗೊಲ್ಲಾಳೇಶ್ವರನಿಗೆ ಬೆಳಗ್ಗೆ ರುದ್ರಾಭಿಷೇಕ ಹಾಗೂ ವಿಶೇಷ ಅಲಂಕಾರ ಪೂಜೆ ನೆರವೇರಿಸಲಾಯಿತು

ರಥೋತ್ಸವ ಹಿನ್ನೆಲೆಯಲ್ಲಿ ಗೋಲಗೇರಿಯ ಗೊಲ್ಲಾಳೇಶ್ವರ ದೇವಸ್ಥಾನವನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು.
icon

(6 / 8)

ರಥೋತ್ಸವ ಹಿನ್ನೆಲೆಯಲ್ಲಿ ಗೋಲಗೇರಿಯ ಗೊಲ್ಲಾಳೇಶ್ವರ ದೇವಸ್ಥಾನವನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು.

ಜಾತ್ರಾ ಮಹೋತ್ಸದ ಹಿನ್ನೆಲೆಯಲ್ಲಿ ಗೊಲ್ಲಾಳೇಶ್ವರ ದೇವಸ್ಥಾನದಲ್ಲಿ ಭಾರೀ ಹೂವಿನ ಅಲಂಕಾರವನ್ನು ಮಾಡಲಾಗಿತ್ತು. ಈ ವೇಳೆ ಸಮಿತಿಯವರು ಹಾಗೂ ಭಕ್ತರು ಅಲ್ಲ ಸೇರಿದ್ದರು.
icon

(7 / 8)

ಜಾತ್ರಾ ಮಹೋತ್ಸದ ಹಿನ್ನೆಲೆಯಲ್ಲಿ ಗೊಲ್ಲಾಳೇಶ್ವರ ದೇವಸ್ಥಾನದಲ್ಲಿ ಭಾರೀ ಹೂವಿನ ಅಲಂಕಾರವನ್ನು ಮಾಡಲಾಗಿತ್ತು. ಈ ವೇಳೆ ಸಮಿತಿಯವರು ಹಾಗೂ ಭಕ್ತರು ಅಲ್ಲ ಸೇರಿದ್ದರು.

ಗೋಲಗೇರಿಯಲ್ಲಿ ರಥೋತ್ಸವ ಹಿನ್ನೆಲೆಯಲ್ಲಿ ಬಂದ ಭಕ್ತರಿಗೆ ಹಲವರು ಪ್ರಸಾದ ಸೇವೆಯನ್ನು ಮಾಡಿದರು.
icon

(8 / 8)

ಗೋಲಗೇರಿಯಲ್ಲಿ ರಥೋತ್ಸವ ಹಿನ್ನೆಲೆಯಲ್ಲಿ ಬಂದ ಭಕ್ತರಿಗೆ ಹಲವರು ಪ್ರಸಾದ ಸೇವೆಯನ್ನು ಮಾಡಿದರು.

Umesha Bhatta P H

TwittereMail
ಕುಂದೂರು ಉಮೇಶಭಟ್ಟ ಪಿ.ಎಚ್.: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಡೆಪ್ಯುಟಿ ಚೀಫ್ ಕಂಟೆಂಟ್ ಪ್ರೊಡ್ಯೂಸರ್. ವಿಜಯ ಕರ್ನಾಟಕದಲ್ಲಿ ವಿಜಯಪುರ ಬ್ಯೂರೊ ಚೀಫ್ ಸೇರಿ ಹಲವು ಮಹತ್ವದ ಹುದ್ದೆಗಳ ನಿರ್ವಹಣೆ. ಮಲೆನಾಡು ಮಿತ್ರ, ಆಂದೋಲನ ಸೇರಿ ವಿವಿಧ ಪತ್ರಿಕೆಗಳಲ್ಲಿ 25 ವರ್ಷಗಳ ಅನುಭವ. ಪರಿಸರ, ಅರಣ್ಯ, ವನ್ಯಜೀವಿ, ಅಭಿವೃದ್ದಿ, ರಾಜಕೀಯ ಆಸಕ್ತಿ ಕ್ಷೇತ್ರಗಳು. 'ಕಾಡಿನ ಕಥೆಗಳು' ಅಂಕಣ ಬರೆಯುತ್ತಿದ್ದಾರೆ. ದಾವಣಗೆರೆ ಜಿಲ್ಲೆಯ ಕುಂದೂರು ಸ್ವಂತ ಊರು. ಸದ್ಯಕ್ಕೆ ಮೈಸೂರು ನಿವಾಸಿ.

ಇತರ ಗ್ಯಾಲರಿಗಳು