ಚೈತ್ರಾ ಕುಂದಾಪುರ ಕೈ ಮೇಲೆ ಮದರಂಗಿ ಕಲರವ; ಬಿಗ್ ಬಾಸ್ ಮಾಜಿ ಸ್ಪರ್ಧಿಯ ಕೈ ಹಿಡಿಯುವ ಗಂಡು ಯಾರು?
ಪ್ರಖರ ಭಾಷಣಗಳ ಮೂಲಕವೇ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡಿದ್ದ, ಬಿಗ್ ಬಾಸ್ ಮೂಲಕ ಕರುನಾಡಿನ ಜನತೆಗೂ ಹತ್ತಿರವಾಗಿದ್ದವರು ಚೈತ್ರಾ ಕುಂದಾಪುರ. ಇದೀಗ ಇದೇ ಚೈತ್ರಾ ಮದುವೆಯ ಸಂಭ್ರಮದಲ್ಲಿದ್ದಾರೆ. ಮೇ 9ರಂದು ಬಾಳಬಂಧನಕ್ಕೆ ಕಾಲಿಡುತ್ತಿದ್ದಾರಿವರು. ಅದರಂತೆ ಮದರಂಗಿ ಶಾಸ್ತ್ರವನ್ನೂ ಮುಗಿಸಿಕೊಂಡಿದ್ದಾರೆ. ಇಲ್ಲಿವೆ ನೋಡಿ ಫೋಟೋಗಳು.
(1 / 6)
ಬಿಗ್ ಬಾಸ್ ಚೈತ್ರಾ ಕುಂದಾಪುರ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿದೆ. ಇನ್ನೇನು ಮೇ 9ರಂದು ಪ್ರೀತಿಸಿದ ಹುಡುಗನನ್ನು ವರಿಸಲಿದ್ದಾರವರು.
(2 / 6)
ಅಂದಹಾಗೆ, ಯಾವುದೇ ಆಡಂಬರ ಇಲ್ಲದೆ, ಆಪ್ತರು ಮತ್ತು ಕುಟುಂಬಸ್ಥರ ಸಮ್ಮುಖದಲ್ಲಿ ದೇವಸ್ಥಾನದಲ್ಲಿ ಚೈತ್ರಾ ಅವರ ಮದುವೆ ನೆರವೇರಲಿದೆ. 12 ವರ್ಷಗಳಿಂದ ಸ್ನೇಹಿತನಾಗಿದ್ದವನ ಜತೆಗೆ ಬಾಳ ಬಂಧಕ್ಕೆ ಕಾಲಿರಿಸುತ್ತಿದ್ದಾರೆ.
(3 / 6)
ಆ ವರ ಯಾರು ಎಂಬ ಬಗ್ಗೆ ಸದ್ಯಕ್ಕೆ ಯಾವುದೇ ಮಾಹಿತಿ ಹೊರಬಿದಿಲ್ಲ. ಇನ್ನೇನು ನಾಳೆ (ಮೇ. 9) ಆ ಕುತೂಹಲಕ್ಕೆ ತೆರೆ ಬೀಳಲಿದೆ. ಚೈತ್ರಾ ಅವರನ್ನು ವರಿಸಿದ ಗಂಡು ಯಾರ ಎಂಬುದು ರಿವೀಲ್ ಆಗಲಿದೆ.
(4 / 6)
ಈಗಾಗಲೇ ಕುಂದಾಪುರದ ಮನೆಯಲ್ಲಿ ವಿವಾಹ ಪೂರ್ವ ಆಚರಣೆಗಳು ಶುರುವಾಗಿದ್ದು, ಮದರಂಗಿ ಶಾಸ್ತ್ರದ ಕಿರು ವಿಡಿಯೋ ತುಣುಕನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ ಚೈತ್ರಾ. ಜತೆಗೆ ಸುದೀರ್ಘ ಬರಹವನ್ನೂ ಬರೆದುಕೊಂಡಿದ್ದಾರೆ. ಅದು ಹೀಗಿದೆ.
(5 / 6)
“ತ್ರೇತಾಯುಗದಲ್ಲಿ ಶ್ರೀರಾಮ, ಲಕ್ಷ ಣ, ಭರತ ಮತ್ತು ಶತ್ರುಘ್ನರ ವಿವಾಹದ ಸಮಯದಲ್ಲಿ ಅವರನ್ನು ಸಿಂಗರಿಸಲು ಅವರ ಕೈ, ಕಾಲು, ಹಾಗೆಯೇ ಮುಖದ ಮೇಲೆ ಪಾಷಾಣಬಣ್ಣ (ವಿವಿಧ ಬಣ್ಣದ ಕಲ್ಲುಗಳಿಂದ ತಯಾರಿಸಿದ ಬಣ್ಣ) ಮತ್ತು ಪುಷ್ಪಬಣ್ಣ (ವಿವಿಧ ಬಣ್ಣದ ಹೂವುಗಳಿಂದ ತಯಾರಿಸಿದ ಬಣ್ಣ) ಗಳ ಸಹಾಯದಿಂದ ಎಲೆ-ಹೂವು ಮುಂತಾದ ಆಕಾರಗಳನ್ನು ಬಿಡಿಸಲಾಗಿತ್ತು. ಈ ಬಣ್ಣಗಳಲ್ಲಿ ವಿವಿಧ ದಿವ್ಯ ಔಷಧೀಯ ವನಸ್ಪತಿಗಳ ರಸಗಳನ್ನು ಬೆರೆಸಲಾಗಿತ್ತು. ಈ ಸುಗಂಧಿ ಮಿಶ್ರಣಕ್ಕೆ ‘ಪತ್ರಾವಲೀ’ ಎಂದು ಹೇಳುತ್ತಿದ್ದರು. (ಆಧಾರ : ‘ಭುಶುಂಡೀ ರಾಮಾಯಣ’ ಮತ್ತು ‘ಶ್ರೀನಾಥಮುನಿ ರಾಮಾಯಣ’)”
(6 / 6)
"ದ್ವಾಪರಯುಗದಲ್ಲಿಯೂ ಸಿಂಗಾರಕ್ಕಾಗಿ ‘ಪತ್ರಾವಲೀ’ಯನ್ನು ಉಪಯೋಗಿಸಲಾಗುತ್ತಿತ್ತು. ‘ತೋಕ’ ಎಂಬ ಹೆಸರಿನ ಶ್ರೀಕೃಷ್ಣನ ಮಿತ್ರನು ‘ಪತ್ರಾವಲೀ’ಯಿಂದ ಶ್ರೀಕೃಷ್ಣ ನನ್ನು ಸಿಂಗರಿಸುತ್ತಿದ್ದನು’ ಎಂದು ‘ಗರ್ಗಸಂಹಿತೆ’, ‘ಶ್ರೀಮದ್ಭಾಗವತ’, ‘ಶ್ರೀಕೃಷ್ಣಕರ್ಣಾಮೃತ’ ಮುಂತಾದ ಶ್ರೀಕೃಷ್ಣನ ಬಗೆಗಿನ ಪ್ರಮುಖ ಗ್ರಂಥಗಳಲ್ಲಿ ಉಲ್ಲೇಖಿಸಿರುವುದು ಕಂಡುಬರುತ್ತದೆ. ಆ ಸಮಯದಲ್ಲಿ ಶ್ರೀಕೃಷ್ಣನ ಗೋವುಗಳನ್ನೂ ‘ಪತ್ರಾವಲಿ’ಯಿಂದ ಸಿಂಗರಿಸಲಾಗುತ್ತಿತ್ತು. ಮದರಂಗಿ ಕೇವಲ ಬಣ್ಣವಲ್ಲ ಅದು ಸಂಸ್ಕೃತಿಯ ಕೈಗನ್ನಡಿ" ಎಂದಿದ್ದಾರೆ.
ಇತರ ಗ್ಯಾಲರಿಗಳು