Yoga day 2024: ಕರ್ನಾಟಕದೆಲ್ಲೆಡೆ ಬೆಳ್ಳಂಬೆಳಿಗ್ಗೆ ಯೋಗದ ಸಡಗರ, ಮೈಸೂರು, ಹುಬ್ಬಳ್ಳಿ, ಬೆಂಗಳೂರಲ್ಲೂ ಯೋಗ ಚಟುವಟಿಕೆ photos
- ಯೋಗ ದಿನದ ಅಂಗವಾಗಿ ಶುಕ್ರವಾರ ಬೆಳಿಗ್ಗೆಯೇ ಯೋಗ ಚಟುವಟಿಕೆ. ಮೈಸೂರು, ಬೆಂಗಳೂರು, ಹುಬ್ಬಳ್ಳಿ, ಮಂಡ್ಯ ಸಹಿತ ಹಲವು ಕಡೆ ಯೋಗ ಚಟುವಟಿಕೆ ನಡೆದವು. ಇದರ ಚಿತ್ರಣ ಇಲ್ಲಿದೆ.
- ಯೋಗ ದಿನದ ಅಂಗವಾಗಿ ಶುಕ್ರವಾರ ಬೆಳಿಗ್ಗೆಯೇ ಯೋಗ ಚಟುವಟಿಕೆ. ಮೈಸೂರು, ಬೆಂಗಳೂರು, ಹುಬ್ಬಳ್ಳಿ, ಮಂಡ್ಯ ಸಹಿತ ಹಲವು ಕಡೆ ಯೋಗ ಚಟುವಟಿಕೆ ನಡೆದವು. ಇದರ ಚಿತ್ರಣ ಇಲ್ಲಿದೆ.
(1 / 10)
ಬೆಂಗಳೂರಿನ ಯಲಹಂಕದಲ್ಲಿರುವ ಭಾರತೀಯ ಸೇನಾ ತರಬೇತಿ ಕೇಂದ್ರದ (Air Force units under this HQ in Bengaluru )ಲ್ಲಿ ಯೋಗ ಚಟುವಟಿಕೆಗಳು ನಡೆದವು.,
(2 / 10)
ಹುಬ್ಬಳ್ಳಿಯ ಗದಗ ರಸ್ತೆಯಲ್ಲಿರುವ ಚಾಲುಕ್ಯ ರೈಲ್ವೆ ಇನ್ಸ್ಟಿಟ್ಯೂಟ್ನಲ್ಲಿ ನೈಋತ್ಯ ರೈಲ್ವೆಯಿಂದ 10ನೇ ಅಂತರಾಷ್ಟ್ರೀಯ ಯೋಗ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಖ್ಯಾತ ಯೋಗ ತರಬೇತುದಾರ ಮತ್ತು ರಾಜ್ಯ ಮಟ್ಟದ ಚಿನ್ನದ ಪದಕ ವಿಜೇತೆ ಶ್ರೀಮತಿ ಉಷಾ ಮೋದ್ ಅವರು ವಿವಿಧ ಆಸನಗಳು (ದೈಹಿಕ ಭಂಗಿಗಳು) ಪ್ರದರ್ಶಿಸಿದರು
(3 / 10)
ಬಳ್ಳಾರಿಯ ಜೆಎಸ್ಡಬ್ಲು(JSW) ಟೌನ್ ಶಿಪ್ ನಲ್ಲಿ ಆಯೋಜಿಸಿದ್ದ ಯೋಗದಿನದಲ್ಲಿ ಸಿಎಂ ಸಿದ್ದರಾಮಯ್ಯ, ವಚನಾನಂದ ಸ್ವಾಮೀಜಿ, ನಟಿ ಶ್ರೀಲೀಲಾ, ವಚನಾನಂದ ಸ್ವಾಮೀಜಿ ಸೇರಿ ಹಲವು ಮುಖಂಡರು ಭಾಗಿಯಾದರು.
(4 / 10)
ಕೇಂದ್ರ ಸಂವಹನ ಇಲಾಖೆ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಭಾರತ ಸರ್ಕಾರ ಮೈಸೂರು ವತಿಯಿಂದ ಶ್ರೀ ವಾಣಿವಿಲಾಸ ಅರಸು ಬಾಲಿಕ ಪ್ರೌಢಶಾಲೆಯಲ್ಲಿ 10 ನೇ ಅಂತಾರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕೇಂದ್ರ ಸಂವಹನ ಇಲಾಖೆ ಕ್ಷೇತ್ರ ಪ್ರಚಾರ ಅಧಿಕಾರಿ ಶ್ರುತಿಧ್ಯಾನ್ ಸಹಿತ ಹಲವರು ಭಾಗಿಯಾದರು.
(5 / 10)
ಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದ ಮುಂಭಾಗದಲ್ಲಿ ಆಯೋಜಿಸಿದ್ದ 'ಅಂತಾರಾಷ್ಟ್ರೀಯ ಯೋಗ ದಿನ' ಕಾರ್ಯಕ್ರಮದಲ್ಲಿ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಚಿವ ಡಾ.ಅಶವಥ್ನಾರಾಯಣ ಮತ್ತಿತರರು ಭಾಗಿಯಾದರು.
(6 / 10)
ಮೈಸೂರು ಅರಮನೆ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಆಯುಷ್ ಇಲಾಖೆ ವತಿಯಿಂದ ನಡೆದ ಹತ್ತನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಸಚಿವ ಡಾ.ಮಹದೇವಪ್ಪ, ಸಂಸದ ಯದುವೀರ್ ಒಡೆಯರ್, ಡಿಸಿ ಡಾ.ರಾಜೇಂದ್ರ, ಪೊಲೀಸ್ ಆಯುಕ್ತ ಬಿ.ರಮೇಶ್ ಮತ್ತಿತರರು ಭಾಗಿಯಾದರು.
(7 / 10)
ಮೈಸೂರು ಅರಮನೆ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಆಯುಷ್ ಇಲಾಖೆ ವತಿಯಿಂದ ನಡೆದ ಹತ್ತನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗವಹಿಸಿದ್ದ ಯೋಗ ಪಟುಗಳು.
(8 / 10)
ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಮೃತ ಸರೋವರಗಳ ಆವರಣದಲ್ಲಿ ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು.
(9 / 10)
ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ 10 ನೇ ಅಂತರಾಷ್ಟ್ರೀಯ ಯೋಗದಿನಾಚರಣೆಯಲ್ಲಿ ಡಿಸಿ ಡಾ.ಕುಮಾರ, ಎಸ್ಪಿ ಯತೀಶ್, ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್ ಭಾಗಿಯಾದರು.
ಇತರ ಗ್ಯಾಲರಿಗಳು