ಕನ್ನಡ ಸುದ್ದಿ  /  Sports  /  Cricket News Is It Ks Bharat Or Ishan Kishan Ravi Shastri Dinesh Karthik Choose Indias Wicketkeeper For Wtc Final Prs

Kishan vs Bharat: ಭರತ್ ಅಥವಾ ಇಶಾನ್ ಕಿಶನ್; ಡಬ್ಲ್ಯೂಟಿಸಿ ಫೈನಲ್​ಗೆ ವಿಕೆಟ್​ ಕೀಪರ್​ ಆಯ್ಕೆ ಮಾಡಿದ ರವಿಶಾಸ್ತ್ರಿ, ದಿನೇಶ್ ಕಾರ್ತಿಕ್

ಆಸ್ಟ್ರೇಲಿಯಾ ವಿರುದ್ಧ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್​ ಪಂದ್ಯಕ್ಕೆ ವಿಕೆಟ್ ಕೀಪರ್‌ ಸ್ಥಾನಕ್ಕೆ ಯಾರಿಗೆ ಅವಕಾಶ ಸಿಗಬೇಕು? ಈ ಪ್ರಶ್ನೆ ಕ್ರಿಕೆಟ್​​ ವಲಯದಲ್ಲಿ ದೊಡ್ಡ ಚರ್ಚೆಯಾಗುತ್ತಿದೆ. ಈ ಬಗ್ಗೆ ಮಾಜಿ ಮುಖ್ಯ ಕೋಚ್ ರವಿಶಾಸ್ತ್ರಿ ಹಾಗೂ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇಶಾನ್ ಕಿಶನ್​ ಮತ್ತು ಕೆಎಸ್​ ಭರತ್​
ಇಶಾನ್ ಕಿಶನ್​ ಮತ್ತು ಕೆಎಸ್​ ಭರತ್​

Ishan kishan vs KS Bharat WTC Final 2023: ಐಪಿಎಲ್​​​ ಮಧ್ಯೆಯೇ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್​ ಪಂದ್ಯಕ್ಕೆ ಟೀಮ್​ ಇಂಡಿಯಾ ಭರ್ಜರಿ ಸಿದ್ಧತೆ ನಡೆಸುತ್ತಿದೆ. ಲೀಗ್​​ ಹಂತದಲ್ಲಿ ಹೊರ ಬಿದ್ದ ತಂಡಗಳ ಆಟಗಾರರು ಅಂದರೆ ಡಬ್ಲ್ಯೂಟಿಸಿ ಫೈನಲ್​ಗೆ ಆಯ್ಕೆಯಾದವರು ಇಂಗ್ಲೆಂಡ್​ನತ್ತ ಹೆಜ್ಜೆ ಹಾಕಿದ್ದಾರೆ. ಕೋಚಿಂಗ್​ ಸಿಬ್ಬಂದಿ ಸಹ ಆಟಗಾರರ ಜೊತೆ ಲಂಡನ್​ಗೆ ಪ್ರಯಾಣಿಸಿದ್ದಾರೆ. ಈ ಮಧ್ಯೆಯೇ ಫೈನಲ್​ ಫೈಟ್​ಗೆ ವಿಕೆಟ್​ ಕೀಪರ್​ ಯಾರಾಗಬೇಕೆಂಬ ಚರ್ಚೆ ಜೋರಾಗಿ ನಡೆಯುತ್ತಿದೆ.

ಆಸ್ಟ್ರೇಲಿಯಾ ವಿರುದ್ಧ ಮುಂಬರುವ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್​ ಪಂದ್ಯಕ್ಕೆ (WTC Final 2023) ವಿಕೆಟ್ ಕೀಪರ್‌ ಸ್ಥಾನಕ್ಕೆ ಯಾರಿಗೆ ಅವಕಾಶ ಸಿಗಬೇಕು? ಈ ಪ್ರಶ್ನೆಯೇ ಕ್ರಿಕೆಟ್​​ ವಲಯದಲ್ಲಿ ದೊಡ್ಡ ಚರ್ಚೆಯಾಗುತ್ತಿದೆ. ಈ ಬಗ್ಗೆ ಭಾರತದ ಮಾಜಿ ಮುಖ್ಯ ಕೋಚ್ ರವಿಶಾಸ್ತ್ರಿ ಹಾಗೂ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಜೂನ್ 7 ರಿಂದ ಓವಲ್‌ನಲ್ಲಿ ಆರಂಭವಾಗಲಿರುವ ಡಬ್ಲ್ಯೂಟಿಸಿ ಫೈನಲ್‌ಗಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್‌ನಲ್ಲಿ ಇಶಾನ್ ಕಿಶನ್ ಮತ್ತು ಕೆಎಸ್ ಭರತ್ ಅವರಲ್ಲಿ ಯಾರನ್ನು ಆಯ್ಕೆ ಮಾಡಬೇಕೆಂಬುದರ ಬಗ್ಗೆ ಟೀಮ್ ಇಂಡಿಯಾ ಮ್ಯಾನೇಜ್‌ಮೆಂಟ್ ಗೊಂದಲದಲ್ಲಿದೆ. ಕೆಲವು ವರದಿಗಳು ಕೆಎಸ್​ ಭರತ್​ ಅವರಿಗೆ ಅವಕಾಶ ಸಿಗುವ ಸಾಧ್ಯತೆ ಹೆಚ್ಚಿದೆ. ಆದರೆ ಟೀಮ್​ ಮ್ಯಾನೇಜ್​ಮೆಂಟ್​ ನಿರ್ಧಾರ ಕುತೂಹಲ ಮೂಡಿಸಿದೆ.

ಕಾರು ಅಪಘಾತದ ನಂತರ ವಿಕೆಟ್ ಕೀಪರ್ ರಿಷಭ್​ ಪಂತ್ ಚೇತರಿಸಿಕೊಳ್ಳುತ್ತಿದ್ದಾರೆ. ಅವರ ಸ್ಥಾನಕ್ಕೆ ಕೆಎಲ್​ ರಾಹುಲ್ ಆಯ್ಕೆ ಆಗಬೇಕಿದ್ದರೂ, ಗಾಯದ ಸಮಸ್ಯೆಯಿಂದ ಮಹತ್ವದ ಪಂದ್ಯದಿಂದ ಹೊರಗುಳಿದಿದ್ದಾರೆ. ರಾಹುಲ್​ ಔಟ್​ ಆದ ಬೆನ್ನಲ್ಲೇ ಇಶಾನ್​ ಕಿಶನ್​ಗೆ ಅವಕಾಶ ನೀಡಲಾಯಿತು.

ರವಿ ಶಾಸ್ತ್ರಿ ಹೇಳಿದ್ದೇನು?

ಆಸ್ಟ್ರೇಲಿಯಾ ವಿರುದ್ಧದ ಡಬ್ಲ್ಯೂಟಿಸಿ ಫೈನಲ್‌ನಲ್ಲಿ ವಿಕೆಟ್ ಕೀಪರ್ ಪಾತ್ರಕ್ಕಾಗಿ ಕೆಎಸ್ ಭರತ್ ಆಯ್ಕೆ ಉತ್ತಮ ಎಂದು ರವಿಶಾಸ್ತ್ರಿ ಹೇಳಿದ್ದಾರೆ. ವರ್ಷದ ಆರಂಭದಲ್ಲಿ ಬಾರ್ಡರ್-ಗವಾಸ್ಕರ್ ಸರಣಿಯಲ್ಲಿ ಭರತ್ ವಿಕೆಟ್ ಕೀಪಿಂಗ್ ಮಾಡಿದ್ದರು. ಹಾಗಾಗಿ ಇಶಾನ್‌ಗಿಂತ ಭರತ್​ಗೆ ಆದ್ಯತೆ ಸಿಗುತ್ತದೆ ಎಂದು ಭಾವಿಸುತ್ತೇನೆ. ಆದರೆ ಯಾರಿಗೆ ಅವಕಾಶ ಸಿಗುತ್ತದೋ ಕಾದು ನೋಡಬೇಕು ಎಂದು ಹೇಳಿದ್ದಾರೆ..

ಆಸ್ಟ್ರೇಲಿಯಾ ವಿರುದ್ಧದ ಎಲ್ಲಾ ಟೆಸ್ಟ್ ಪಂದ್ಯಗಳನ್ನು ಆಡಿದ್ದರು. ಹಾಗಾಗಿ, ಅಂತಿಮ 11ರಲ್ಲಿ ಆಯ್ಕೆಯಾಗುವ ಮೊದಲ ಆಯ್ಕೆ ಭರತ್​ ಅವರೇ ಆಗಿರಲಿದೆ ಎಂದು ಭಾವಿಸುತ್ತೇನೆ. ಡಬ್ಲ್ಯೂಟಿಸಿ ಫೈನಲ್‌ನಲ್ಲಿ ಪಿಚ್ ಪರಿಸ್ಥಿತಿಯೂ ನಿರ್ಣಾಯಕ. ಆ ಬಳಿಕ ಯಾರಿಗೆ ಅವಕಾಶ ಸಿಗಬೇಕು ಎಂಬುದನ್ನು ನಿರ್ಧರಿಸಬೇಕು. ಇಬ್ಬರು ಸ್ಪಿನ್ನರ್​​ಗಳನ್ನು ಆಡಿಸಿದರೆ ಭರತ್​​ರನ್ನೇ ಆಯ್ಕೆ ಮಾಡಬೇಕು ಎಂದು ರವಿಶಾಸ್ತ್ರಿ ಸಲಹೆ ಕೊಟ್ಟಿದ್ದಾರೆ.

ದಿನೇಶ್ ಕಾರ್ತಿಕ್ ಹೇಳಿದ್ದೇನು?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅನುಭವಿ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಅವರು, ಭರತ್​ರನ್ನು ಆಯ್ಕೆ ಮಾಡುವಂತೆ ಸಲಹೆ ನೀಡಿದ್ದಾರೆ. ಆತನಿಗೆ ಅಪಾರ ಅನುಭವ ಇದೆ. ಆತನೇ ಮೊದಲ ಆದ್ಯತೆಯಾದರೆ ಉತ್ತಮ. ಇಶಾನ್ ಕಿಶನ್ ಡಬ್ಲ್ಯೂಟಿಸಿ ಫೈನಲ್​ನಲ್ಲಿ ನೇರವಾಗಿ ಆಡುವುದು ನಿರೀಕ್ಷೆಗಿಂತ ಹೆಚ್ಚು ಎಂದು ನಾನು ಭಾವಿಸುತ್ತೇನೆ ಎಂದು ಸೂಚಿಸಿದ್ದಾರೆ.

ಆಸ್ಟ್ರೇಲಿಯಾ ಸರಣಿಯಲ್ಲಿ ಭರತ್​​​ ನಿರೀಕ್ಷಿತ ಪ್ರದರ್ಶನ ನೀಡಲಿಲ್ಲ. ಭಾರತ ವಿಕೆಟ್ ಕೀಪರ್ ಆಗಿ ಮಿಂಚಿದರೂ ನಿರೀಕ್ಷಿತ ಮಟ್ಟದಲ್ಲಿ ಬ್ಯಾಟಿಂಗ್ ಮಾಡಲು ಸಾಧ್ಯವಾಗಲಿಲ್ಲ. ಸ್ಪಿನ್ ಸ್ನೇಹಿ ಪಿಚ್‌ಗಳಲ್ಲಿ ಭರತ್,​ ಕೇವಲ 101 ರನ್ ಗಳಿಸಿದ್ದರು. ಭಾರತದ ಪರ ಕೇವಲ 4 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. ಆದರೆ 90 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿರುವುದು ವಿಶೇಷ.

ಇಶಾನ್ ಇನ್ನೂ ಟೆಸ್ಟ್​​ಗೆ ಪದಾರ್ಪಣೆ ಮಾಡಿಲ್ಲ. ಆದರೆ 48 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಕಿಶನ್​ಗೆ ಅವಕಾಶ ಸಿಗದಿದ್ದರೂ ಐಪಿಎಲ್‌ನಲ್ಲಿ ಕೆಎಲ್ ರಾಹುಲ್ ಗಾಯಗೊಂಡ ನಂತರ ಡಬ್ಲ್ಯೂಟಿಸಿ ಫೈನಲ್​ಗೆ ಭಾರತ ತಂಡ ಸೇರಿದ್ದಾರೆ. ಕಳೆದ ವರ್ಷಾಂತ್ಯದಲ್ಲಿ ಚಿತ್ತಗಾಂಗ್ ನಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ಏಕದಿನ ಪಂದ್ಯದಲ್ಲಿ ಇಶಾನ್ ದ್ವಿಶತಕ ಸಿಡಿಸಿದ್ದರು.