ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಏ 28ರ ತನಕ ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಡಾಡ್ಜ್ ಬಾಲ್ ಚಾಂಪಿಯನ್ ಶಿಪ್
ಕನ್ನಡ ಸುದ್ದಿ  /  ಕ್ರೀಡೆ  /  ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಏ 28ರ ತನಕ ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಡಾಡ್ಜ್ ಬಾಲ್ ಚಾಂಪಿಯನ್ ಶಿಪ್

ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಏ 28ರ ತನಕ ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಡಾಡ್ಜ್ ಬಾಲ್ ಚಾಂಪಿಯನ್ ಶಿಪ್

ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದ ಡಾಡ್ಜ್ ಬಾಲ್ ಚಾಂಪಿಯನ್ ಶಿಪ್ ಕ್ರೀಡಾಕೂಟ ಶುಕ್ರವಾರ (ಏ 25) ಶುರುವಾಗಿದ್ದು, ಏಪ್ರಿಲ್ 28ರ ತನಕ ನಡೆಯಲಿದೆ. (ವರದಿ- ಹರೀಶ್ ಮಾಂಬಾಡಿ, ಮಂಗಳೂರು)

ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಏ 28ರ ತನಕ ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಡಾಡ್ಜ್ ಬಾಲ್ ಚಾಂಪಿಯನ್ ಶಿಪ್ ನಡೆಯಲಿದೆ. (ಸಾಂಕೇತಿಕ ಚಿತ್ರ)
ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಏ 28ರ ತನಕ ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಡಾಡ್ಜ್ ಬಾಲ್ ಚಾಂಪಿಯನ್ ಶಿಪ್ ನಡೆಯಲಿದೆ. (ಸಾಂಕೇತಿಕ ಚಿತ್ರ)

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದ ಡಾಡ್ಜ್ ಬಾಲ್ ಚಾಂಪಿಯನ್ ಶಿಪ್ ಕ್ರೀಡಾಕೂಟ ಶುಕ್ರವಾರ (ಏ 25) ಶುರುವಾಗಿದ್ದು, ಏಪ್ರಿಲ್ 28ರ ತನಕ ನಡೆಯಲಿದೆ ಎಂದು ಕ್ರೀಡಾಕೂಟ ಆಯೋಜಿಸುತ್ತಿರುವ ಮಾಣಿ ಬಾಲವಿಕಾಸ ಟ್ರಸ್ಟ್ ಕಾರ್ಯದರ್ಶಿ ಮಹೇಶ್ ಶೆಟ್ಟಿ ತಿಳಿಸಿದ್ದಾರೆ. ಭಾರತದಲ್ಲಿ ಈಚೆಗೆ ಪ್ರವರ್ಧಮಾನಕ್ಕೆ ಬಂದಿರುವ ಆಟವಿದು. ಭಾರತ ಡಾಡ್ಜ್ ಬಾಲ್ ಫೆಡರೇಷನ್ ಮತ್ತು ಕರ್ನಾಟಕ ಡಾಡ್ಜ್ ಬಾಲ್ ಸಂಸ್ಥೆಯ ಸಹಯೋಗದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಡಾಜ್‌ಬಾಲ್ ಸಂಸ್ಥೆ ಆಯೋಜಿಸಿರುವ ಮೂರು ರಾಷ್ಟ್ರಗಳ ಟೂರ್ನಿ, ರಾಷ್ಟ್ರೀಯ ಮತ್ತು ರಾಜ್ಯ ಚಾಂಪಿಯನ್‌ಷಿಪ್‌ ಮಾಣಿಯ ಬಾಲವಿಕಾಸ ವಸತಿ ಶಾಲೆಯ ಉದಯ ಚೌಟ ಸ್ಮಾರಕ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.

ಏ 28ರ ತನಕ ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಡಾಡ್ಜ್ ಬಾಲ್ ಚಾಂಪಿಯನ್ ಶಿಪ್

ಮೊದಲ ದಿನ (ಏಪ್ರಿಲ್ 25) ರಾಜ್ಯ ಚಾಂಪಿಯನ್‌ ಷಿಪ್‌ನಲ್ಲಿ 15 ತಂಡಗಳು ಪಾಲ್ಗೊಂಡಿವೆ. ಭಾರತ, ನೇಪಾಳ ಮತ್ತು ಮಲೇಷ್ಯಾದ ಪುರುಷ ತಂಡಗಳ ಟೂರ್ನಿ ಮತ್ತು ರಾಷ್ಟ್ರೀಯ ಪುರುಷ, ಮಹಿಳೆಯರ ಹಾಗೂ ಮಿಶ್ರ ವಿಭಾಗಗಳ ಚಾಂಪಿಯನ್‌ಷಿಪ್‌ 26 ಮತ್ತು 27ರಂದು ನಡೆಯಲಿದೆ.

ಭಾರತೀಯ ಡಾಡ್ಜ್ ಬಾಲ್ ಒಕ್ಕೂಟವು ಕರ್ನಾಟಕ ರಾಜ್ಯ ಡಾಡ್ಜ್ ಬಾಲ್ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲಾ ಡಾಡ್ಜ್ ಬಾಲ್ ಸಂಸ್ಥೆ ಮತ್ತು ಮಾಣಿ ಬಾಲ‌ವಿಕಾಸ ವಸತಿ ಶಾಲೆಯ ಸಹಯೋಗದೊಂದಿಗೆ ಕ್ರೀಡಾಕೂಟ ಆಯೋಜಿಸಿದೆ ಮೊದಲಬಾರಿಗೆ ರಾಜ್ಯ ,ರಾಷ್ಟ್ರೀಯ ಅಂತಾರಾಷ್ಟ್ರೀಯ ಮಟ್ಟದಲ್ಲಿ ಡಾಡ್ಜ್ ಬಾಲ್ ಕ್ರೀಡಾಕೂಟ ಆಯೋಜಿಸಲಾಗಿದ್ದು ಅದನ್ನು ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಪ್ರದೇಶವಾದ ಮಾಣಿಯಲ್ಲಿ ನಡೆಸಲಾಗುತ್ತಿರುವುದು ಹೆಮ್ಮೆಯ ಸಂಗತಿ ಎಂದು ಅವರು ಹೇಳಿದರು

ಡಾಡ್ಜ್ ಬಾಲ್ ಕ್ರೀಡೆಗೆ ಸಂಬಂಧಿಸಿ ಸಂವಾದ -ಗೋಷ್ಠಿ, ಆಹಾರೋತ್ಸವ

ಪುರುಷರು ಮತ್ತು ಮಹಿಳೆಯರ ತಂಡಗಳು ಪಾಲ್ಗೊಳ್ಳುವ ಈ ಕ್ರೀಡಾಕೂಟದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಮೂರು, ರಾಷ್ಟ್ರಮಟ್ಟದ 42 ಮತ್ತು ರಾಜ್ಯಮಟ್ಟದ 38 ತಂಡಗಳ ಸಹಿತ ಎರಡೂವರೆ ಸಾವಿರಕ್ಕೂ ಮಿಕ್ಕಿ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ . ಡಾಡ್ಜ್ ಬಾಲ್ ಕ್ರೀಡೆಗೆ ಸಂಬಂಧಿಸಿದಂತೆ ವಿಚಾರ ವಿನಿಮಯ, ಸಂವಾದ, ಗೋಷ್ಠಿಗಳನ್ನೂ ಸಂಘಟಿಸಲಾಗಿದೆ.

ವಿಶೇಷ ಆಕರ್ಷಣೆಯಾಗಿ ಆಹಾರೋತ್ಸವ( ಫುಡ್ ಫೆಸ್ಟ್) ಆಯೋಜಿಸಲಾಗಿದೆ. ಕ್ರೀಡಾಕೂಟದ ಯಶಸ್ಸಿಗಾಗಿ ಊರಿನವರನ್ನು ಸೇರಿಸಿಕೊಂಡು ವಿವಿಧ ಸಮಿತಿಗಳನ್ನು ರಚಿಸಲಾಗಿದೆ ಎಂದು ಅವರು ಹೇಳಿದರು

ಇಂದು ಸಂಜೆ ಕ್ರೀಡಾಕೂಟ ಉದ್ಘಾಟನೆ

ಕ್ರೀಡಾಕ್ಷೇತ್ರಕ್ಕೆ ಅಮೂಲ್ಯ ಕೊಡುಗೆ ನೀಡಿದ ದಿವಂಗತ ಉದಯ ಚೌಟ ಹೆಸರಿನ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯುವ ಕ್ರೀಡಾಕೂಟವನ್ನು ಎ.26ರಂದು ಶನಿವಾರ ಸಂಜೆ ಆರು ಗಂಟೆಗೆ ಸ್ಪೀಕರ್ ಯು. ಟಿ. ಖಾದರ್ ಉದ್ಘಾಟಿಸಲಿದ್ದಾರೆ.

ಬಾಲವಿಕಾಸ ಟ್ರಸ್ಟ್ ಅಧ್ಯಕ್ಷ ಜೆ. ಪ್ರಹ್ಲಾದ ಶೆಟ್ಟಿ ಅಧ್ಯಕ್ಷ ತೆ ವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬೃಜೇಶ್ ಚೌಟ, ರಾಜೇಶ್ ನಾಯ್ಕ್ ,ಅಶೋಕ್ ಕುಮಾರ್ ರೈ, ಸಹಿತ ಜಿಲ್ಲೆಯ ಶಾಸಕರು , ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸಲಿದ್ದಾರೆ ಎಂದರು

ಏನಿದು ಡಾಡ್ಜ್‌ಬಾಲ್ ಆಟ

ಡಾಡ್ಜ್‌ಬಾಲ್ ಒಂದು ತಂಡ ಕ್ರೀಡೆಯಾಗಿದ್ದು, ಇದರಲ್ಲಿ ಎರಡು ಎದುರಾಳಿ ತಂಡಗಳ ಆಟಗಾರರು ಚೆಂಡುಗಳನ್ನು ಎಸೆದು ಎದುರಾಳಿಗಳಿಗೆ ಹೊಡೆಯಲು ಪ್ರಯತ್ನಿಸುತ್ತಾರೆ ಮತ್ತು ತಾವೇ ಹೊಡೆತಕ್ಕೆ ಒಳಗಾಗುವುದನ್ನು ತಪ್ಪಿಸುತ್ತಾರೆ. ಪ್ರತಿ ತಂಡದ ಉದ್ದೇಶವೆಂದರೆ ಎದುರಾಳಿ ತಂಡದ ಎಲ್ಲಾ ಸದಸ್ಯರನ್ನು ಎಸೆದ ಚೆಂಡುಗಳಿಂದ ಹೊಡೆಯುವುದು, ಎದುರಾಳಿ ಎಸೆದ ಚೆಂಡನ್ನು ಹಿಡಿಯುವುದು ಅಥವಾ ಎದುರಾಳಿಯು ಅಂಕಣದ ಹೊರಗೆ ಹೆಜ್ಜೆ ಹಾಕುವಂತಹ ಉಲ್ಲಂಘನೆಯನ್ನು ಮಾಡುವಂತೆ ಪ್ರೇರೇಪಿಸುವುದಾಗಿದೆ.

ಡಾಡ್ಜ್ ಬಾಲ್ ಕ್ರೀಡಾಕೂಟ: ಮಲೇಶಿಯಾ ತಂಡಕ್ಕೆ ಸ್ವಾಗತ

ಡಾಡ್ಜ್ ಬಾಲ್ ಚಾಂಪಿಯನ್ ಶಿಪ್ ಕ್ರೀಡಾಕೂಟಕ್ಕೆ ಆಗಮಿಸಿದ ಮಲೇಶಿಯಾ ತಂಡದ ನಾಯಕ ದಸತರಣ್ ಮತ್ತು ತಂಡವನ್ನು ಆಯೋಜಕರು ಸ್ವಾಗತಿಸಿದ ಸಂದರ್ಭ.
ಡಾಡ್ಜ್ ಬಾಲ್ ಚಾಂಪಿಯನ್ ಶಿಪ್ ಕ್ರೀಡಾಕೂಟಕ್ಕೆ ಆಗಮಿಸಿದ ಮಲೇಶಿಯಾ ತಂಡದ ನಾಯಕ ದಸತರಣ್ ಮತ್ತು ತಂಡವನ್ನು ಆಯೋಜಕರು ಸ್ವಾಗತಿಸಿದ ಸಂದರ್ಭ.

ಮಾಣಿ ಪೆರಾಜೆಯ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಏ.28 ರವರೆಗೆ ನಡೆಯುವ ಅಂತಾರಾಷ್ಟ್ರೀಯ ಮಟ್ಟದ ಡಾಡ್ಜ್ ಬಾಲ್ ಚಾಂಪಿಯನ್ ಶಿಪ್ ಕ್ರೀಡಾಕೂಟಕ್ಕೆ ಆಗಮಿಸಿದ ಮಲೇಶಿಯಾ ತಂಡದ ನಾಯಕ ದಸತರಣ್ ಮತ್ತು ತಂಡವನ್ನು ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆ ಹಾಗೂ ಮಾಣಿ ಗ್ರಾಮಪಂಚಾಯತ್ ವತಿಯಿಂದ ಶುಕ್ರವಾರ ಬೆಳಿಗ್ಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲಾಯಿತು.ಈ ಸಂದರ್ಭ ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಮಾಜಿ ಅಧ್ಯಕ್ಷ ಕೊಡಾಜೆ ಬಾಲಕೃಷ್ಣ ಆಳ್ವ, ನೇರಳಕಟ್ಟೆ ಶಾಲಾ ಶತಮಾನೋತ್ಸವ ಸಮಿತಿ ಅಧ್ಯಕ್ಷ ನಿರಂಜನ್ ಜೈನ್, ಮಾಣಿ ಬಾಲವಿಕಾಸ ಟ್ರಸ್ಟ್ ಕಾರ್ಯದರ್ಶಿ ಮಹೇಶ್ ಶೆಟ್ಟಿ, ದೈಹಿಕ ಶಿಕ್ಷಣ ಶಿಕ್ಷಕ ದಿನಕರ ಪೂಜಾರಿ ಉಪಸ್ಥಿತರಿದ್ದರು.

(ವರದಿ- ಹರೀಶ್ ಮಾಂಬಾಡಿ, ಮಂಗಳೂರು)

Umesh Kumar S

TwittereMail
ಉಮೇಶ್ ಕುಮಾರ್ ಶಿಮ್ಲಡ್ಕ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದ ಸುದ್ದಿ ಸಂಪಾದಕ. ಜೀವನದ ಕಲಿಕಾರ್ಥಿ. ದೇಶ, ವಿದೇಶಗಳ ಪ್ರಸಕ್ತ ವಿದ್ಯಮಾನ, ವಾಣಿಜ್ಯ, ವಿಜ್ಞಾನ ತಂತ್ರಜ್ಞಾನ ಕುರಿತು ಕುತೂಹಲಿ. ಹೊಸ ದಿಗಂತ, ಉದಯವಾಣಿ, ವಿಜಯ ಕರ್ನಾಟಕ, ವಿಜಯವಾಣಿ ಪತ್ರಿಕೆಗಳು. ಏಷ್ಯಾನೆಟ್ ಸುವರ್ಣ, ಸಮಯ ಸುದ್ದಿವಾಹಿನಿಗಳ ವಿವಿಧ ವಿಭಾಗಗಳು ಸೇರಿ 20 ವರ್ಷಗಳಿಗೂ ಹೆಚ್ಚಿನ ಅನುಭವ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಿವಾಸಿ.
ಬ್ಯಾಡ್ಮಿಂಟನ್, ಟೆನಿಸ್, ಕಬಡ್ಡಿ, ಫುಟ್ಬಾಲ್, ಆರ್ಚರಿ, ಶೂಟಿಂಗ್, ಒಲಿಂಪಿಕ್ಸ್, ಏಷ್ಯನ್ ಗೇಮ್ಸ್, ಅಥ್ಲೆಟಿಕ್ಸ್ ಸೇರಿದಂತೆ ಕ್ರೀಡಾ ಜಗತ್ತಿನ ಸಮಗ್ರ ವಿದ್ಯಮಾನಗಳನ್ನು ತಿಳಿಯಲು 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದ ಕ್ರೀಡಾ ವಿಭಾಗಕ್ಕೆ ಭೇಟಿ ನೀಡಿ.