ODI World Cup: ಭಾರತದಲ್ಲಿ ಪಾಕಿಸ್ತಾನ ಪಂದ್ಯಗಳು ನಡೆಯಲ್ಲ.. ಹಾಗಾದ್ರೆ ಮತ್ತೆಲ್ಲಿ?
ಏಷ್ಯಾ ಕಪ್ ಟೂರ್ನಿಗಾಗಿ ಪಾಕಿಸ್ತಾನಕ್ಕೆ ಭಾರತ ಹೋಗದಿರುವ ನಿರ್ಧಾರ ಕೈಗೊಂಡಿದೆ. ಅದೇ ರೀತಿ ಏಕದಿನ ವಿಶ್ವಕಪ್ ಟೂರ್ನಿಗಾಗಿ, ಭಾರತದ ನೆಲ ಸ್ಪರ್ಶಿಸಲು ಪಾಕಿಸ್ತಾನ ಕೂಡ ತಿರಸ್ಕರಿಸಿದೆ. ವಿಶ್ವಕಪ್ನಲ್ಲಿ ಪಾಕಿಸ್ತಾನ ಪಂದ್ಯಗಳನ್ನು ಪಾಕಿಸ್ತಾನದಲ್ಲಿ ಆಯೋಜಿಸಲು ಐಸಿಸಿ ಚಿಂತನೆ ನಡೆಸಿದೆ.
ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಮಾರ್ಚ್ 31ರಿಂದ ಶುರುವಾಗುವ ಐಪಿಎಲ್ (IPL) ಹಬ್ಬಕ್ಕೆ ಅಂತಿಮ ಹಂತದ ಸಿದ್ಧತೆಯಲ್ಲಿ ತೊಡಗಿದೆ. ಇದರ ನಡುವೆ ಭಾರತದಲ್ಲಿ ನಡೆಯುವ ಏಕದಿನ ವಿಶ್ವಕಪ್ ಆಯೋಜನೆ ಕುರಿತು ಮಹತ್ವದ ಸುದ್ದಿಯೊಂದು ಕೇಳಿ ಬಂದಿದೆ. ಏಷ್ಯಾ ಕಪ್ ಟೂರ್ನಿಗಾಗಿ (Asia Cup) ಪಾಕಿಸ್ತಾನಕ್ಕೆ ಭಾರತ ಹೋಗದಿರುವ ನಿರ್ಧಾರ ಕೈಗೊಂಡಿದೆ. ಅದೇ ರೀತಿ ಏಕದಿನ ವಿಶ್ವಕಪ್ ಟೂರ್ನಿಗಾಗಿ (ODI World Cup in India 2023), ಭಾರತದ ನೆಲ ಸ್ಪರ್ಶಿಸಲು ಪಾಕಿಸ್ತಾನ ಕೂಡ ತಿರಸ್ಕರಿಸಿದೆ.
ವಾಸ್ತವವಾಗಿ ಈ ವಿಶ್ವಕಪ್ನಲ್ಲಿ ಪಾಕಿಸ್ತಾನಕ್ಕೆ ಸಂಬಂಧಿಸಿದ ಎಲ್ಲಾ ಪಂದ್ಯಗಳನ್ನು ತಟಸ್ಥ ಸ್ಥಳದಲ್ಲಿ ಆಯೋಜಿಸುವ ಕುರಿತು ಐಸಿಸಿ ಸಭೆಯಲ್ಲಿ ಚರ್ಚೆ ನಡೆದಿದೆ. ಈ ವಿಷಯವನ್ನು ಅತ್ಯಂತ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಐಸಿಸಿ (ICC), ಪಾಕಿಸ್ತಾನ ತಂಡದ ಪಂದ್ಯಗಳನ್ನು ಬಾಂಗ್ಲಾದೇಶದಲ್ಲಿ ಆಡಿಸಲು ಚರ್ಚೆ ನಡೆಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಆದರೆ ಈ ಬಗ್ಗೆ ಎಲ್ಲರ ಅಭಿಪ್ರಾಯ ತೆಗೆದುಕೊಂಡ ಬಳಿಕವೇ ಮುಂದಿನ ಹೆೆಜ್ಜೆ ಇಡಲು ಐಸಿಸಿ ನಿರ್ಧರಿಸಿದೆ.
ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ನಲ್ಲಿ ಪಾಕಿಸ್ತಾನ ಕ್ರಿಕೆಟಿಗರಿಗೆ ವೀಸಾ ನೀಡುವುದಾಗಿ ಭಾರತ ಸರ್ಕಾರ ಐಸಿಸಿಗೆ ತಿಳಿಸಿದೆ. ಆದರೂ ಈ ನಿರ್ಧಾರವನ್ನು ತಿರಸ್ಕರಿಸಿರುವ ಪಾಕಿಸ್ತಾನ, ಭಾರತಕ್ಕೆ ಹೆಜ್ಜೆ ಇಡುವುದಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದೆ. ಈ ವಿವಾದವನ್ನು ಶಮನಗೊಳಿಸಲು ಮಧ್ಯ ಪ್ರವೇಶಿಸಿರುವ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಪಾಕಿಸ್ತಾನದ ಎಲ್ಲಾ ಪಂದ್ಯಗಳನ್ನು ಬಾಂಗ್ಲಾದೇಶದಲ್ಲಿ ಆಯೋಜಿಸುವ ಕುರಿತು ಚರ್ಚೆ ನಡೆಸಿದೆ. ಈ ಬಗ್ಗೆ ಬಿಸಿಸಿಐ ಜೊತೆ ಮಾತುಕತೆಗೂ ಮುಂದಾಗಿದೆ.
ಈ ವರ್ಷ ಏಷ್ಯಾಕಪ್ ಏಕದಿನ ಟೂರ್ನಿ ಪಾಕಿಸ್ತಾನದಲ್ಲಿ ನಡೆಯಲಿದೆ. ಈ ಟೂರ್ನಿಗಾಗಿ ಪಾಕ್ಗೆ ಟೀಮ್ ಇಂಡಿಯಾ ಪ್ರಯಾಣ ಬೆಳೆಸುವುದಿಲ್ಲ ಎಂದು ಭಾರತ ಸರ್ಕಾರ ಈಗಾಗಲೇ ಸ್ಪಷ್ಟಪಡಿಸಿದೆ. ಇದೇ ಹಿನ್ನೆಲೆಯಲ್ಲಿ ಪಾಕಿಸ್ತಾನ ಕೂಡ ಭಾರತದಲ್ಲಿ 2023ರ ಏಕದಿನ ವಿಶ್ವಕಪ್ ಆಡದಂತೆ ಬೆದರಿಕೆ ಹಾಕುತ್ತಿದೆ. ಈ ಕ್ರಮದಲ್ಲಿ ಐಸಿಸಿ ಅಖಾಡಕ್ಕಿಳಿದಿದೆ ಎನ್ನಲಾಗಿದೆ.
ಕಳೆದ 5 ತಿಂಗಳಿಂದ ನಡೆಯುತ್ತಿರುವ ಏಷ್ಯಾ ಕಪ್ 2023 ವಿವಾದವು ಬಹುತೇಕ ಬಗೆಹರಿಯುವ ಹಂತದಲ್ಲಿದೆ ಎಂದು ಇಎಸ್ಪಿಎನ್ ವರದಿ ಬಹಿರಂಗಪಡಿಸಿದೆ. ಇತ್ತೀಚೆಗೆ ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಸಭೆಯಲ್ಲಿ ಏಷ್ಯಾಕಪ್ಗೆ ಪಾಕಿಸ್ತಾನವೇ ಆತಿಥ್ಯ ವಹಿಸಲಿದೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಭಾರತ ತಂಡ, ಪಾಕಿಸ್ತಾನಕ್ಕೆ ಹೋಗುವುದಿಲ್ಲ ಎಂಬುದು ಸ್ಪಷ್ಟವಾಗಿದೆ. ಭಾರತದ ಪಂದ್ಯಗಳನ್ನು ತಟಸ್ಥ ಸ್ಥಳದಲ್ಲಿ ಆಯೋಜಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಇದಕ್ಕೂ ಮೊದಲು ಪಾಕಿಸ್ತಾನದಲ್ಲಿ ಟೂರ್ನಿ ಆಯೋಜನೆ ನಡೆಸದಿರಲು ಚರ್ಚೆ ನಡೆದಿತ್ತು.
ಕ್ರೀಡೆಗೆ ಸಂಬಂಧಿಸಿ ಮತ್ತಷ್ಟು ಸುದ್ದಿಗಳು!
Sourav Ganguly: ಭಾರತ ICC ಟ್ರೋಫಿ ಯಾಕೆ ಗೆಲ್ಲುತ್ತಿಲ್ಲ ಎಂಬುದಕ್ಕೆ ಉತ್ತರ ಕೊಟ್ಟ ಗಂಗೂಲಿ!
ಟೀಮ್ ಇಂಡಿಯಾ (Team India) ಕೊನೆಯದಾಗಿ 2013ರಲ್ಲಿ ಎಂ.ಎಸ್ ಧೋನಿ (MS Dhoni) ನಾಯಕತ್ವದ ಅಡಿಯಲ್ಲಿ ಚಾಂಪಿಯನ್ಸ್ ಟ್ರೋಫಿ ಗೆದ್ದಿತ್ತು. ಆ ಬಳಿಕ ಅಂದರೆ 10 ವರ್ಷಗಳಿಂದ ಭಾರತ ಐಸಿಸಿ ಟ್ರೋಫಿ ಜಯಿಸಿಲ್ಲ. ದ್ವಿಪಕ್ಷೀಯ ಸರಣಿಗಳಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿರುವ ರೋಹಿತ್ ಪಡೆ, ಐಸಿಸಿ ಟೂರ್ನಿಗಳಲ್ಲಿ ಪದೇ ಪದೇ ಎಡವುತ್ತಲೇ ಬಂದಿದೆ. ಫೈನಲ್, ಸೆಮಿಫೈನಲ್ ಪಂದ್ಯಗಳಲ್ಲೇ ಹೆಚ್ಚು ಮುಗ್ಗರಿಸಿದೆ. ಇದೀಗ ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ (Sourav Ganguly), ಟೀಮ್ ಇಂಡಿಯಾ ಐಸಿಸಿ ಟ್ರೋಫಿ ಯಾಕೆ ಗೆಲ್ಲುತ್ತಿಲ್ಲ ಎಂಬುದಕ್ಕೆ ಉತ್ತರ ನೀಡಿದ್ದಾರೆ. ಪೂರ್ತಿ ಸ್ಟೋರಿ ಓದಲು ಈ ಲಿಂಕ್ ಒತ್ತಿ.
ICC ODI Rankings: ರೋಹಿತ್ಗೆ ಬಿಗ್ ಶಾಕ್ ಕೊಟ್ಟ ಕೊಹ್ಲಿ.. ಐಸಿಸಿ ಶ್ರೇಯಾಂಕದಲ್ಲಿ ವಿರಾಟ್ ಜಿಗಿತ!
ಟೀಮ್ ಇಂಡಿಯಾ ಪ್ರಮುಖ ಆಟಗಾರ ವಿರಾಟ್ ಕೊಹ್ಲಿ (Virat Kohli) ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಮತ್ತೆ ಅಗ್ರಸ್ಥಾನದತ್ತ ದಾಪುಗಾಲಿಟ್ಟಿದ್ದಾರೆ. ಕಿಂಗ್ ಕೊಹ್ಲಿ ಬ್ಯಾಟಿಂಗ್ನಲ್ಲಿ ಮತ್ತೊಮ್ಮೆ ತಮ್ಮ ಹಳೆಯ ಶೈಲಿಗೆ ಮರಳುತ್ತಿದ್ದು, ಕಳಪೆ ಫಾರ್ಮ್ನಿಂದ ಕಂಬ್ಯಾಕ್ ಮಾಡುತ್ತಿದ್ದಾರೆ. ಈಗ ಐಸಿಸಿ ನೂತನ ಏಕದಿನ ರ್ಯಾಂಕಿಂಗ್ (ICC ODI Ranking) ಪ್ರಕಟಗೊಂಡಿದ್ದು, ಮಾಜಿ ನಾಯಕ ಭಾರಿ ಜಿಗಿತ ಕಂಡಿದ್ದಾರೆ. ಪೂರ್ತಿ ಸ್ಟೋರಿ ಓದಲು ಈ ಲಿಂಕ್ ಒತ್ತಿ.