ಮಂಗಳೂರಿನ ಸುಹಾಸ್ ಶೆಟ್ಟಿ ಕೊಲೆ ಹಿಂದೆ ಬಜ್ಪೆ ಹೆಡ್ ಕಾನ್ಸ್ಟೇಬಲ್ ಕೈವಾಡ; ಹಿಂದೂ ಸಂಘಟನೆ ಆರೋಪ
ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಬಜ್ಪೆ ಠಾಣಾ ಹೆಡ್ ಕಾನ್ಸ್ಟೇಬಲ್ ರಶೀದ್ ಕೂಡಾ ಸೇರಿದ್ದಾರೆ ಎಂಬ ಶಂಕೆ ಬಲವಾಗಿದೆ. ಆದ್ದರಿಂದ ರಶೀದ್ರನ್ನು ತನಿಖೆಗೊಳಪಡಿಸಿದರೆ, ಇದರ ಹಿಂದಿರುವ ಪೂರ್ಣ ಮಾಹಿತಿ ದೊರೆಯಲು ಸಾಧ್ಯ ಎಂದು ಹಿಂದೂ ಜಾಗರಣ ವೇದಿಕೆ ಪ್ರಾಂತ ಪ್ರಮುಖ್ ಕೆ.ಟಿ.ಉಲ್ಲಾಸ್ ಆಗ್ರಹಿಸಿದ್ದಾರೆ.. ಕಳೆದ ಒಂದು ತಿಂಗಳಿನಿಂದ ರಶೀದ್ ಪದೇಪದೇ ಸುಹಾಸ್ ಶೆಟ್ಟಿಗೆ ಕರೆ ಮಾಡಿ ಹಿಂಸೆ ಕೊಡುತ್ತಿದ್ದ ಎಂದು ಆತನ ಸ್ನೇಹಿತರು ಹೇಳುತ್ತಿದ್ದಾರೆ. ಕೊಲೆಗೆ ಮೂರು ದಿನಕ್ಕೆ ಮೊದಲು ಎಸಿಪಿಯವರು ಸುಹಾಸ್ ಶೆಟ್ಟಿಯನ್ನು ಕರೆದು ಶಸ್ತ್ರಾಸ್ತ್ರಗಳನ್ನು ಹಿಡಿದುಕೊಂಡು ತಿರುಗಾಡಿದ್ದಲ್ಲಿ ಕೇಸ್ ಹಾಕಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದರು. ಆದ್ದರಿಂದ ಆತನಲ್ಲಿ ಶಸ್ತ್ರಾಸ್ತ್ರಗಳು ಇಲ್ಲ ಎಂಬ ಸುದ್ದಿ ಕೊಲೆ ಆರೋಪಿಗಳಿಗೆ ಹೇಗೆ ಗೊತ್ತಾಗಿದೆ. ಈ ಮಾಹಿತಿ ರಶೀದ್ನಿಂದಲೇ ಆರೋಪಿಗಳಿಗೆ ಸಿಕ್ಕಿದೆ ಎಂದು ಅವರು ಆರೋಪಿಸಿದ್ದಾರೆ..
ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಬಜ್ಪೆ ಠಾಣಾ ಹೆಡ್ ಕಾನ್ಸ್ಟೇಬಲ್ ರಶೀದ್ ಕೂಡಾ ಸೇರಿದ್ದಾರೆ ಎಂಬ ಶಂಕೆ ಬಲವಾಗಿದೆ. ಆದ್ದರಿಂದ ರಶೀದ್ರನ್ನು ತನಿಖೆಗೊಳಪಡಿಸಿದರೆ, ಇದರ ಹಿಂದಿರುವ ಪೂರ್ಣ ಮಾಹಿತಿ ದೊರೆಯಲು ಸಾಧ್ಯ ಎಂದು ಹಿಂದೂ ಜಾಗರಣ ವೇದಿಕೆ ಪ್ರಾಂತ ಪ್ರಮುಖ್ ಕೆ.ಟಿ.ಉಲ್ಲಾಸ್ ಆಗ್ರಹಿಸಿದ್ದಾರೆ.. ಕಳೆದ ಒಂದು ತಿಂಗಳಿನಿಂದ ರಶೀದ್ ಪದೇಪದೇ ಸುಹಾಸ್ ಶೆಟ್ಟಿಗೆ ಕರೆ ಮಾಡಿ ಹಿಂಸೆ ಕೊಡುತ್ತಿದ್ದ ಎಂದು ಆತನ ಸ್ನೇಹಿತರು ಹೇಳುತ್ತಿದ್ದಾರೆ. ಕೊಲೆಗೆ ಮೂರು ದಿನಕ್ಕೆ ಮೊದಲು ಎಸಿಪಿಯವರು ಸುಹಾಸ್ ಶೆಟ್ಟಿಯನ್ನು ಕರೆದು ಶಸ್ತ್ರಾಸ್ತ್ರಗಳನ್ನು ಹಿಡಿದುಕೊಂಡು ತಿರುಗಾಡಿದ್ದಲ್ಲಿ ಕೇಸ್ ಹಾಕಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದರು. ಆದ್ದರಿಂದ ಆತನಲ್ಲಿ ಶಸ್ತ್ರಾಸ್ತ್ರಗಳು ಇಲ್ಲ ಎಂಬ ಸುದ್ದಿ ಕೊಲೆ ಆರೋಪಿಗಳಿಗೆ ಹೇಗೆ ಗೊತ್ತಾಗಿದೆ. ಈ ಮಾಹಿತಿ ರಶೀದ್ನಿಂದಲೇ ಆರೋಪಿಗಳಿಗೆ ಸಿಕ್ಕಿದೆ ಎಂದು ಅವರು ಆರೋಪಿಸಿದ್ದಾರೆ..