ಬೆಂಗಳೂರಿನಲ್ಲಿ ಚೀನಾ ಹೆಚ್ಎಂಪಿ ವೈರಸ್ ಪ್ರಕರಣ; ಗಾಬರಿಯಾಗುವ ಅಗತ್ಯವಿಲ್ಲ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ
ಕೊರೊನಾ ಕರಿ ನೆರಳಿನಿಂದ ಹೊರ ಬಂದು ನಿಟ್ಟುಸಿರು ಬಿಡುತ್ತಿದ್ದಂತೆ ಈಗ ಚೀನಾದಲ್ಲಿ ಮತ್ತೊಂದು ಹೊಸ ವೈರಸ್ ಪತ್ತೆಯಾಗಿದೆ. ಹೆಚ್ಎಂಪಿ ಎಂಬ ವೈರಸ್ ಈಗ ಕರ್ನಾಟಕಕ್ಕೂ ಕಾಲಿಟ್ಟಿದ್ದು ಬೆಂಗಳೂರಿನಲ್ಲಿ 8 ತಿಂಗಳ ಮಗುವಿನಲ್ಲಿ ದೃಢವಾಗಿದೆ. ರಾಜ್ಯದಲ್ಲಿ ವೈರಸ್ ವಿಚಾರ ಸುದ್ದಿಯಾಗುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ತುರ್ತು ಸಭೆ ನಡೆಸಿದ್ದಾರೆ. ಚೀನಾದಲ್ಲಿ ಹೊಸ ವೈರಸ್ ಪತ್ತೆಯಾಗಿದೆ, ಈ ವಿಚಾರವಾಗಿ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆಗೆ ಸೂಚಿಸಿದ್ದೇನೆ, ಸಚಿವ ದಿನೇಶ್ ಗುಂಡೂರಾವ್ ಜೊತೆ ಕೂಡಾ ಮಾತನಾಡಿದ್ದೇನೆ. , ವೈರಸ್ ತಡೆಗೆ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದರು. ಆರೋಗ್ಯ ಸಚಿವರ ಜೊತೆ ಸಭೆ ನಡೆಸಿ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ನೀಡುವುದಾಗಿ ಹೇಳಿದ್ದಾರೆ.
ಕೊರೊನಾ ಕರಿ ನೆರಳಿನಿಂದ ಹೊರ ಬಂದು ನಿಟ್ಟುಸಿರು ಬಿಡುತ್ತಿದ್ದಂತೆ ಈಗ ಚೀನಾದಲ್ಲಿ ಮತ್ತೊಂದು ಹೊಸ ವೈರಸ್ ಪತ್ತೆಯಾಗಿದೆ. ಹೆಚ್ಎಂಪಿ ಎಂಬ ವೈರಸ್ ಈಗ ಕರ್ನಾಟಕಕ್ಕೂ ಕಾಲಿಟ್ಟಿದ್ದು ಬೆಂಗಳೂರಿನಲ್ಲಿ 8 ತಿಂಗಳ ಮಗುವಿನಲ್ಲಿ ದೃಢವಾಗಿದೆ. ರಾಜ್ಯದಲ್ಲಿ ವೈರಸ್ ವಿಚಾರ ಸುದ್ದಿಯಾಗುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ತುರ್ತು ಸಭೆ ನಡೆಸಿದ್ದಾರೆ. ಚೀನಾದಲ್ಲಿ ಹೊಸ ವೈರಸ್ ಪತ್ತೆಯಾಗಿದೆ, ಈ ವಿಚಾರವಾಗಿ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆಗೆ ಸೂಚಿಸಿದ್ದೇನೆ, ಸಚಿವ ದಿನೇಶ್ ಗುಂಡೂರಾವ್ ಜೊತೆ ಕೂಡಾ ಮಾತನಾಡಿದ್ದೇನೆ. , ವೈರಸ್ ತಡೆಗೆ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದರು. ಆರೋಗ್ಯ ಸಚಿವರ ಜೊತೆ ಸಭೆ ನಡೆಸಿ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ನೀಡುವುದಾಗಿ ಹೇಳಿದ್ದಾರೆ.