ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ, ರೆಡ್ ಅಲರ್ಟ್ ಘೋಷಣೆ; ಬೆಂಗಳೂರಿನಲ್ಲಿ ಇನ್ನೂ ಕೆಲವು ದಿನ ಮಳೆ ಭೀತಿ
ಕರ್ನಾಟಕದಲ್ಲಿ ಈ ಬಾರಿ ವಾಡಿಕೆಗಿಂತ ಹೆಚ್ಚು ಮುಂಗಾರು ಪೂರ್ವ ಮಳೆ ಸುರಿಯುತ್ತಿದೆ. ವಾಯುಭಾರ ಕುಸಿತದಿಂದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆ ಸುರಿಯುತ್ತಿದೆ. ರಾಜಧಾನಿ ಬೆಂಗಳೂರಿನಲ್ಲಿ ಕಳೆದ 3-4 ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಭಾರೀ ಅನಾಹುತ ಸೃಷ್ಠಿಸಿದೆ. ಈ ಮಧ್ಯೆ ಹವಾಮಾನ ಇಲಾಖೆ ಉತ್ತರ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಬೆಂಗಳೂರಿನಲ್ಲೂ ಇನ್ನೂ ಕೆಲವು ದಿನ ಮಳೆ ಸುರಿಯುವ ಸಾಧ್ಯತೆ ಇದೆ.
ಕರ್ನಾಟಕದಲ್ಲಿ ಈ ಬಾರಿ ವಾಡಿಕೆಗಿಂತ ಹೆಚ್ಚು ಮುಂಗಾರು ಪೂರ್ವ ಮಳೆ ಸುರಿಯುತ್ತಿದೆ. ವಾಯುಭಾರ ಕುಸಿತದಿಂದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆ ಸುರಿಯುತ್ತಿದೆ. ರಾಜಧಾನಿ ಬೆಂಗಳೂರಿನಲ್ಲಿ ಕಳೆದ 3-4 ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಭಾರೀ ಅನಾಹುತ ಸೃಷ್ಠಿಸಿದೆ. ಈ ಮಧ್ಯೆ ಹವಾಮಾನ ಇಲಾಖೆ ಉತ್ತರ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಬೆಂಗಳೂರಿನಲ್ಲೂ ಇನ್ನೂ ಕೆಲವು ದಿನ ಮಳೆ ಸುರಿಯುವ ಸಾಧ್ಯತೆ ಇದೆ.