ಹಿರಿಯರ ಮೇಲೆ ಕೈ ಮಾಡಿದ್ದನ್ನು ಪ್ರಶ್ನಿಸಿದ ಪೊಲೀಸರ ಮೇಲೆ ವ್ಯಕ್ತಿಯಿಂದ ಹಲ್ಲೆ; ಮಂಡ್ಯ ಜಿಲ್ಲೆ ಪಾಂಡವಪುರದಲ್ಲಿ ನಡೆದ ಘಟನೆ
ಹಿರಿಯರ ಮೇಲೆ ಕೈ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ವ್ಯಕ್ತಿಯೊಬ್ಬ ಪೊಲೀಸ್ ಮೇಲೆ ಹಲ್ಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ಪೊಲೀಸ್ ಸ್ಟೇಷನ್ನಲ್ಲಿ ನಡೆದಿದೆ. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಲಕ್ಷ್ಮೀನಾರಾಯಣ ಹಾಗೂ ಸಾಗರ್ ಎಂಬುವರ ನಡುವೆ ಜಗಳ ನಡೆದಿತ್ತು. ಈ ಕೇಸ್ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು. ಮೊದಲು ಸಾಗರ್ ಅಲ್ಲಿಗೆ ಬಂದಿದ್ದಾನೆ. ನಂತರ ಲಕ್ಷ್ಮೀನಾರಾಯಣ್ ಬಂದಿದ್ದಾರೆ. ಆತ ಪೊಲೀಸ್ ಸ್ಟೇಷನ್ ಬಳಿ ಬಂದು ಅಲ್ಲಿಂದ ಚೇರ್ ಮೇಲೆ ಕೂರಲು ಹೋಗಿದ್ದಾರೆ. ಆದರೆ ಸಾಗರ್ ಬಂದು ಆ ಚೇರನ್ನು ಕಸಿದುಕೊಳ್ಳಲು ಯತ್ನಿಸಿದ್ದಾರೆ. ಹಿರಿಯರ ಬಳಿ ಈ ರೀತಿ ವರ್ತಿಸುತ್ತಿದ್ದನ್ನು ನೋಡಿದ ಪೊಲೀಸ್ ಕಾನ್ಸ್ಟೇಬಲ್, ಸಾಗರ್ಗೆ ಮೆಲ್ಲಗೆ ಒಂದು ಏಟು ಕೊಟ್ಟಿದ್ಧಾರೆ. ಇಷ್ಟಕ್ಕೆ ಕೋಪಗೊಂಡ ಸಾಗರ್, ಆ ಪೊಲೀಸರ ಮೇಲೆಯೇ ಹಲ್ಲೆ ಮಾಡಿದ್ದಾನೆ. ಈ ವಿಡಿಯೋ ವೈರಲ್ ಆಗುತ್ತಿದ್ದು ಸಾಗರ್ ವರ್ತನೆಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ.
ಹಿರಿಯರ ಮೇಲೆ ಕೈ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ವ್ಯಕ್ತಿಯೊಬ್ಬ ಪೊಲೀಸ್ ಮೇಲೆ ಹಲ್ಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ಪೊಲೀಸ್ ಸ್ಟೇಷನ್ನಲ್ಲಿ ನಡೆದಿದೆ. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಲಕ್ಷ್ಮೀನಾರಾಯಣ ಹಾಗೂ ಸಾಗರ್ ಎಂಬುವರ ನಡುವೆ ಜಗಳ ನಡೆದಿತ್ತು. ಈ ಕೇಸ್ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು. ಮೊದಲು ಸಾಗರ್ ಅಲ್ಲಿಗೆ ಬಂದಿದ್ದಾನೆ. ನಂತರ ಲಕ್ಷ್ಮೀನಾರಾಯಣ್ ಬಂದಿದ್ದಾರೆ. ಆತ ಪೊಲೀಸ್ ಸ್ಟೇಷನ್ ಬಳಿ ಬಂದು ಅಲ್ಲಿಂದ ಚೇರ್ ಮೇಲೆ ಕೂರಲು ಹೋಗಿದ್ದಾರೆ. ಆದರೆ ಸಾಗರ್ ಬಂದು ಆ ಚೇರನ್ನು ಕಸಿದುಕೊಳ್ಳಲು ಯತ್ನಿಸಿದ್ದಾರೆ. ಹಿರಿಯರ ಬಳಿ ಈ ರೀತಿ ವರ್ತಿಸುತ್ತಿದ್ದನ್ನು ನೋಡಿದ ಪೊಲೀಸ್ ಕಾನ್ಸ್ಟೇಬಲ್, ಸಾಗರ್ಗೆ ಮೆಲ್ಲಗೆ ಒಂದು ಏಟು ಕೊಟ್ಟಿದ್ಧಾರೆ. ಇಷ್ಟಕ್ಕೆ ಕೋಪಗೊಂಡ ಸಾಗರ್, ಆ ಪೊಲೀಸರ ಮೇಲೆಯೇ ಹಲ್ಲೆ ಮಾಡಿದ್ದಾನೆ. ಈ ವಿಡಿಯೋ ವೈರಲ್ ಆಗುತ್ತಿದ್ದು ಸಾಗರ್ ವರ್ತನೆಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ.