ಭಾರತದ ಸೇನೆಯಿಂದ ಉಗ್ರರ ವಿರುದ್ಧ ಪ್ರತಿಕಾರ; ಜಮ್ಮು ಕಾಶ್ಮೀರದಲ್ಲಿ ಪ್ರವಾಸಿಗರಿಗೆ ವಿಶೇಷ ರಕ್ಷಣೆ
- ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ ಬೆನ್ನಲ್ಲೇ ಸೇನೆ ಚುರುಕಿನ ಕಾರ್ಯಾಚರಣೆ ಆರಂಭಿಸಿದೆ. ನಿನ್ನೆ ತಡರಾತ್ರಿ ಗೃಹ ಸಚಿವ ಅಮಿತ್ ಶಾ ಜೊತೆಗೆ ಸಭೆ ನಡೆಸಿದ ಬಳಿಕ ಆಪರೇಷನ್ ಆಲ್ ಔಟ್ ಕಾರ್ಯಾಚರಣೆ ಶುರುವಾಗಿದ್ದು ಉಗ್ರರ ಜಾಡು ಹಿಡಿಯುವ ಪ್ರಯತ್ನ ನಡೆಸಲಾಗುತ್ತಿದೆ. ನಿನ್ನೆ ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆದಿದ್ದು ಕರ್ನಾಟಕದ ಇಬ್ಬರ ಸಹಿತ 28 ವಂದಿ ಪ್ರವಾಸಿಗರು ಸಾವನ್ನಪ್ಪಿದ್ದಾರೆ. ಇನ್ನು ಜಮ್ಮು ಕಾಶ್ಮೀರದಲ್ಲಿರುವ ಪ್ರವಾಸಿಗರಿಗೆ ಸೇನೆ ಹಾಗೂ ಜಮ್ಮು ಪೊಲೀಸರು ವಿಶೇಷ ರಕ್ಷಣೆ ಒದಗಿಸಿದ್ದಾರೆ.
- ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ ಬೆನ್ನಲ್ಲೇ ಸೇನೆ ಚುರುಕಿನ ಕಾರ್ಯಾಚರಣೆ ಆರಂಭಿಸಿದೆ. ನಿನ್ನೆ ತಡರಾತ್ರಿ ಗೃಹ ಸಚಿವ ಅಮಿತ್ ಶಾ ಜೊತೆಗೆ ಸಭೆ ನಡೆಸಿದ ಬಳಿಕ ಆಪರೇಷನ್ ಆಲ್ ಔಟ್ ಕಾರ್ಯಾಚರಣೆ ಶುರುವಾಗಿದ್ದು ಉಗ್ರರ ಜಾಡು ಹಿಡಿಯುವ ಪ್ರಯತ್ನ ನಡೆಸಲಾಗುತ್ತಿದೆ. ನಿನ್ನೆ ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆದಿದ್ದು ಕರ್ನಾಟಕದ ಇಬ್ಬರ ಸಹಿತ 28 ವಂದಿ ಪ್ರವಾಸಿಗರು ಸಾವನ್ನಪ್ಪಿದ್ದಾರೆ. ಇನ್ನು ಜಮ್ಮು ಕಾಶ್ಮೀರದಲ್ಲಿರುವ ಪ್ರವಾಸಿಗರಿಗೆ ಸೇನೆ ಹಾಗೂ ಜಮ್ಮು ಪೊಲೀಸರು ವಿಶೇಷ ರಕ್ಷಣೆ ಒದಗಿಸಿದ್ದಾರೆ.