ದರ್ಶನ್‌ ತೂಗುದೀಪ್‌ ಬಿಡುಗಡೆ ಆಗುತ್ತಿದ್ದಂತೆ ದೇವಸ್ಥಾನಕ್ಕೆ ತೆರಳಿ ಪತಿ ಹೆಸರಲ್ಲಿ ವಿಶೇಷ ಪೂಜೆ ಸಲ್ಲಿಸಿದ ವಿಜಯಲಕ್ಷ್ಮೀ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ದರ್ಶನ್‌ ತೂಗುದೀಪ್‌ ಬಿಡುಗಡೆ ಆಗುತ್ತಿದ್ದಂತೆ ದೇವಸ್ಥಾನಕ್ಕೆ ತೆರಳಿ ಪತಿ ಹೆಸರಲ್ಲಿ ವಿಶೇಷ ಪೂಜೆ ಸಲ್ಲಿಸಿದ ವಿಜಯಲಕ್ಷ್ಮೀ

ದರ್ಶನ್‌ ತೂಗುದೀಪ್‌ ಬಿಡುಗಡೆ ಆಗುತ್ತಿದ್ದಂತೆ ದೇವಸ್ಥಾನಕ್ಕೆ ತೆರಳಿ ಪತಿ ಹೆಸರಲ್ಲಿ ವಿಶೇಷ ಪೂಜೆ ಸಲ್ಲಿಸಿದ ವಿಜಯಲಕ್ಷ್ಮೀ

Published Oct 31, 2024 04:25 PM IST Rakshitha Sowmya
twitter
Published Oct 31, 2024 04:25 PM IST

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ತೂಗುದೀಪ್‌ ಜೈಲು ಸೇರುತ್ತಿದ್ದಂತೆ ಪತಿಯ ಜಾಮೀನಿಗಾಗಿ ವಿಜಯಲಕ್ಷ್ಮೀ ಸಾಕಷ್ಟು ಅಲೆದಾಡಿದ್ದರು, ಜೊತೆಗೆ ವಿವಿಧ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿದ್ದರು. ಇದೀಗ ದರ್ಶನ್‌ಗೆ 6 ವಾರಗಳ ಕಾಲ ಮೆಡಿಕಲ್‌ ಬೇಲ್‌ ಸಿಕ್ಕಿದೆ. ಕೆಲವೊಂದು ಷರತ್ತುಗಳನ್ನು ವಿಧಿಸಿ ನ್ಯಾಯಾಲಯ ದರ್ಶನ್‌ ತೂಗುದೀಪ್‌ಗೆ ಮಧ್ಯಂತರ ಜಾಮೀನು ನೀಡಿದೆ ದರ್ಶನ್‌ ಜೈಲಿನಿಂದ ಹೊರ ಬರುತ್ತಿದ್ದಂತೆ ಪತ್ನಿ ವಿಜಯಲಕ್ಷ್ಮೀ ದೇವಸ್ಥಾನಕ್ಕೆ ಹೋಗಿ ಪೂಜೆ ಸಲ್ಲಿಸಿದ್ದಾರೆ. ವಿಜಯಲಕ್ಷ್ಮೀ ದೇವಸ್ಥಾನಕ್ಕೆ ಬರುತ್ತಿದ್ದಂತೆ ಅಭಿಮಾನಿಗಳು ಅವರನ್ನು ನೋಡಲು ಜಮಾಯಿಸಿದರು. ಅಲ್ಲಿಯೂ ಜನರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್‌ ಮಾಡಬೇಕಾಗಿ ಬಂತು. ವಿಜಯಲಕ್ಷ್ಮೀ, ದರ್ಶನ್‌ ಹೆಸರಿನಲ್ಲಿ ಪೂಜೆ ಮಾಡಿಸುತ್ತಿರುವ ವಿಡಿಯೋ ವೈರಲ್‌ ಆಗುತ್ತಿದೆ.

More