Brahmanandam: ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಪರ ತೆಲುಗು ಹಾಸ್ಯನಟ ಬ್ರಹ್ಮಾನಂದಂ ಭರ್ಜರಿ ಪ್ರಚಾರ; ವಿಡಿಯೋ ನೋಡಿ
- ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೇವಲ 4 ದಿನಗಳು ಬಾಕಿ ಇದೆ. ದರ್ಶನ್, ಸುದೀಪ್ ಸೇರಿದಂತೆ ಸ್ಯಾಂಡಲ್ವುಡ್ ಮಂದಿ ಬಿಜೆಪಿ ಪರ ಪ್ರಚಾರದಲ್ಲಿ ತೊಡಗಿದ್ದು, ತೆಲುಗಿನ ಖ್ಯಾತ ಹಾಸ್ಯನಟ ಬ್ರಹ್ಮಾನಂದಂ ಕೂಡ ಕಮಲ ಪಕ್ಷಕ್ಕೆ ಸಾಥ್ ನೀಡಿದ್ದಾರೆ. ಶುಕ್ರವಾರ (ಮೇ 5) ಪೇರೆಸಂದ್ರದಲ್ಲಿ ಚಿಕ್ಕಬಳ್ಳಾಪುರ ಅಭ್ಯರ್ಥಿ ಸಚಿವ ಡಾ.ಕೆ. ಸುಧಾಕರ್ ಪರ ಭರ್ಜರಿ ಪ್ರಚಾರ ನಡೆಸಿದ್ದಾರೆ. ಈ ಕ್ಷೇತ್ರದಲ್ಲಿ ತೆಲುಗು ಮಾತನಾಡುವವರ ಸಂಖ್ಯೆ ಕೂಡ ಹೆಚ್ಚಿದ್ದು, ಬ್ರಹ್ಮಾನಂದಂ ಅವರನ್ನು ನೋಡಲು ಜನರು ಮುಗಿಬಿದ್ದಿದ್ದರು.