ಮುಂಬೈ-ಪಂಜಾಬ್ ಪಂದ್ಯ ಸ್ಥಳಾಂತರ, ಯಾಕೆ?

ಮುಂಬೈ-ಪಂಜಾಬ್ ಪಂದ್ಯ ಸ್ಥಳಾಂತರ, ಯಾಕೆ?

By Prasanna Kumar PN
May 08, 2025

Hindustan Times
Kannada

ಭಾರತ ಮತ್ತು ಪಾಕಿಸ್ತಾನ ಉದ್ವಿಗ್ನತೆಯು ಐಪಿಎಲ್​ ಮೇಲೂ ಪರಿಣಾಮ ಬೀರಿದೆ. ಮೇ 11ರಂದು ಧರ್ಮಶಾಲಾದಲ್ಲಿ ನಡೆಯಬೇಕಿದ್ದ ಪಂದ್ಯವನ್ನು ಅಧಿಕೃತವಾಗಿ ಸ್ಥಳಾಂತರಿಸಲಾಗಿದೆ.

ಆಪರೇಷನ್ ಸಿಂದೂರ ನಂತರ ಮೇ 11ರಂದು ನಡೆಯಬೇಕಿದ್ದ ಪಂಜಾಬ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ಸ್ಥಳಾಂತರ ಮಾಡಲಾಗುತ್ತದೆ ಎನ್ನಲಾಗಿತ್ತು. ಇದೀಗ ಈ ಸುದ್ದಿ ನಿಜವಾಗಿದೆ.

ಮುಂಬೈ ಮತ್ತು ಪಂಜಾಬ್ ನಡುವಿನ ಹೈವೋಲ್ಟೇಜ್ ಪಂದ್ಯವನ್ನು ಧರ್ಮಶಾಲಾದಿಂದ ಅಹ್ಮದಾಬಾದ್​ಗೆ ಸ್ಥಳಾಂತರ ಮಾಡಲಾಗಿದೆ. ಈ ಬಗ್ಗೆ ಬಿಸಿಸಿಐ ಅಧಿಕೃತಗೊಳಿಸಿದೆ.

ಧರ್ಮಶಾಲಾದಿಂದ ಪಂದ್ಯ ಸ್ಥಳಾಂತರಿಸುವ ಕುರಿತು ಗುಜರಾತ್ ಕ್ರಿಕೆಟ್ ಸಂಸ್ಥೆ ಕಾರ್ಯದರ್ಶಿ ಅನಿಲ್ ಪಟೇಲ್ ಮಾಹಿತಿ ನೀಡಿದ್ದಾರೆ.

ಇದಕ್ಕೂ ಮೊದಲು ಪಂದ್ಯವನ್ನು ಮುಂಬೈನ ಬ್ರಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಆಯೋಜಿಸಲು ಊಹಾಪೋಹಗಳು ಹರಡಿದ್ದವು. ಆದರೆ ಈ ಮಾಹಿತಿ ಸುಳ್ಳಾಗಿದೆ.

ಆಪರೇಷನ್ ಸಿಂದೂರ ಬಳಿಕ ಪಾಕಿಸ್ತಾನದಿಂದ ಪ್ರತಿ ದಾಳಿಯ ಬೆದರಿಕೆ ಗಮನದಲ್ಲಿ ಇಟ್ಟುಕೊಂಡು ಕೇಂದ್ರ ಸರ್ಕಾರ ಗಡಿಗೆ ಹೊಂದಿಕೊಂಡ ರಾಜ್ಯಗಳು, ನಗರಗಳ ವಿಮಾನ ನಿಲ್ದಾಣ ಮುಚ್ಚಿದೆ.

ಧರ್ಮಶಾಲಾ ಅಂತಾರಾಷ್ಟ್ರೀಯ ಗಡಿಯಿಂದ ಕೇವಲ 150 ಕಿಮೀ ದೂರದಲ್ಲಿದೆ. ಉದ್ವಿಗ್ನ ಪರಿಸ್ಥಿತಿಯಲ್ಲಿ ವಿಮಾನ ನಿಲ್ದಾಣವನ್ನೂ ಮುಚ್ಚಲು ನಿರ್ಧರಿಸಲಾಗಿದೆ. ಈ ಕಾರಣಕ್ಕೆ ಅಲ್ಲಿ ನಡೆಯಬೇಕಿದ್ದ ಮುಂಬೈ-ಪಂಜಾಬ್ ನಡುವಿನ ಪಂದ್ಯವನ್ನು ಸ್ಥಳಾಂತರಿಸಲಾಗಿದೆ.

ಕಣ್ಮರೆಯಾಗುತ್ತಿರುವ ಭಾರತದ 5 ಅಪರೂಪದ  ಮಾವಿನ ತಳಿಗಳು

Photo Credit: File Photo