ಪವಿತ್ರಾ ಗೌಡ ಬೆನ್ನು ತಟ್ಟಿ ಸಮಾಧಾನ ಮಾಡಿದ್ರಂತೆ ನಟ ದರ್ಶನ್‌ 

By Praveen Chandra B
Jan 10, 2025

Hindustan Times
Kannada

ಕೋರ್ಟ್‌ಗೆ ಹಾಜರಾದ ಆರೋಪಿಗಳು

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿ ಜಾಮೀನು ಮೂಲಕ ಹೊರಗಿರುವ ನಟ ದರ್ಶನ್‌ ಜನವರಿ 10 ರಂದು ಕೋರ್ಟ್‌ಗೆ ಹಾಜರಾಗಿದ್ದಾರೆ.

ನ್ಯಾಯಾಲಯದಲ್ಲಿ ಮುಖಾಮುಖಿ

 17 ಆರೋಪಿಗಳು ಇಂದು (ಜನವರಿ 10) ಕೋರ್ಟ್‌ಗೆ ಹಾಜರಾದರು. ಜಾಮೀನು ಪಡೆದು ಹೊರಬಂದ ಬಳಿಕ ಕೋರ್ಟ್‌ ಸಮೀಪ ಆರೋಪಿಗಳಾದ ದರ್ಶನ್, ಪವಿತ್ರ ಗೌಡ ಮುಖಾಮುಖಿಯಾದರು. 

ರೇಣುಕಾಸ್ವಾಮಿ ಕೊಲೆ ಪ್ರಕರಣ

ಈ ಸಂದರ್ಭದಲ್ಲಿ ನಟ ದರ್ಶನ್‌ ಮತ್ತು ಪವಿತ್ರ ಗೌಡ  ಮುಖಾಮುಖಿಯಾಗಿದ್ದಾರೆ. ಈ ಸಂದರ್ಭದಲ್ಲಿ ಪವಿತ್ರಾ ಗೌಡರ ಬೆನ್ನು ತಟ್ಟಿ ದರ್ಶನ್‌ ಸಂತೈಸಿದ್ದಾರೆ ಎಂದು ವರದಿಗಳು ತಿಳಿಸಿವೆ.

ಪ್ರತ್ಯಕ್ಷದರ್ಶಿಗಳ ಹೇಳಿಕೆ

ಜಾಮೀನು ಸಿಕ್ಕರೂ ಪವಿತ್ರಾಗೌಡ ಮತ್ತು ದರ್ಶನ್ ಮುಖಾಮುಖಿ ಭೇಟಿಯಾಗಿರಲಿಲ್ಲ. ಈ ಹಿಂದೆ ವಿಚಾರಣೆಯ ಸಂದರ್ಭದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತ್ರ ಮುಖಾಮುಖಿಯಾಗಿದ್ದರು.

ಪ್ರತ್ಯಕ್ಷದರ್ಶಿಗಳ ಹೇಳಿಕೆ

ನಂತರ ಇಬ್ಬರೂ ದೂರವೇ ಉಳಿದಿದ್ದರು. ದರ್ಶನ್‌, ಪವಿತ್ರಾ ಗೌಡ ಸೇರಿದಂತೆ 7 ಮಂದಿಗೆ ಹೈಕೋರ್ಟ್‌ ಡಿ. 13 ರಂದು ಜಾಮೀನು ಮಂಜೂರು ಮಾಡಿತ್ತು.

ಧನ್ವಿರ್‌ ಜತೆ ದರ್ಶನ್‌ ಆಗಮನ

ನಟ ದರ್ಶನ್ ಅವರು ಮತ್ತೊಬ್ಬ ನಟ ಧನ್ವೀರ್ ಜೊತೆ ನ್ಯಾಯಾಲಯಕ್ಕೆ ಆಗಮಿಸಿದರು. ಅವರೊಂದಿಗೆ ಅವರ ವಕೀಲರೂ ಇದ್ದರು.

ಮುಂಚಿತವಾಗಿ ಆಗಮಿಸಿದ್ದ ಪವಿತ್ರಾ ಗೌಡ, ತಮ್ಮ ವಕೀಲರೊಂದಿಗೆ ನ್ಯಾಯಾಲಯದ ಆವರಣದಲ್ಲಿ ಚರ್ಚಿಸುತ್ತಾ ನಿಂತಿದ್ದರು.

ವಿಶೇಷ ಎಂದರೆ ದರ್ಶನ್ ಸಾಮಾನ್ಯರಂತೆ ನಡೆದುಕೊಂಡೇ ನ್ಯಾಯಾಲಯದ ಒಳಗೆ ಹೋದರು. 

ಆರೋಪಿಗಳೆಲ್ಲರೂ ನ್ಯಾಯಾಲಯಕ್ಕೆ ಹಾಜರಾದ ನಂತರ ಹಾಜರಿ ಪಡೆದುಕೊಂಡ ನ್ಯಾಯಾಧೀಶರು ಪ್ರಕರಣದ ವಿಚಾರಣೆಯನ್ನು ಫೆಬ್ರವರಿ 25ಕ್ಕೆ ಮುಂದೂಡಿ ಆದೇಶಿಸಿದರು.

ಅಸಲಿ, ನಕಲಿ ಬಾದಾಮಿಯನ್ನು ಗುರುತಿಸುವುದು ಹೇಗೆ?